ನೀರುಪಾಲಾದ ಯುವಕನ ಕುಟುಂಬಕ್ಕೆ ರೇಣುಕಾಚಾರ್ಯ 1 ಲಕ್ಷ ಪರಿಹಾರ

Public TV
1 Min Read

ದಾವಣಗೆರೆ: ಸ್ನಾನ ಮಾಡಲು ಹೋಗಿ ನೀರುಪಾಲಾದ ಯುವಕನ ಕುಟುಂಬಕ್ಕೆ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು 1 ಲಕ್ಷ ಪರಿಹಾರವನ್ನು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಜೊತೆ ರೇಣುಕಾಚಾರ್ಯ ಭೇಟಿ ನೀಡಿದರು. ಇದೇ ವೇಳೆ ಯುವಕನ ಕುಟುಂಬಕ್ಕೆ ಒಂದು ಲಕ್ಷ ವೈಯಕ್ತಿಕ ಪರಿಹಾರ ನೀಡಿದರು. ಅಲ್ಲದೆ ಯುವಕನ ತಾಯಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದರು. ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆಯನ್ನು ಕುಡ ರೇಣುಕಾಚಾರ್ಯ ನೀಡಿದರು.

ಹೊನ್ನಾಳಿಯ ಬಳಿ ಇರುವ ತುಂಗಭದ್ರಾ ನದಿಯಲ್ಲಿ ಮಾದನಬಾವಿ ಗ್ರಾಮದ ಯುವಕ ಗಜೇಂದ್ರ (28) ಈಜಲು ತೆರಳಿದ್ದನು. ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರುಪಾಲಾಗಿದ್ದನು. ಈಜು ತಜ್ಞರು ಅಗ್ನಿ ಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವಿಕ್ಟೋರಿಯಾ ಆಸ್ಪತ್ರೆಯ ಸಿ ಬ್ಲಾಕ್ ಮುಂಭಾಗ ವಿದ್ಯುತ್ ಭಾಗ್ಯ

Share This Article
Leave a Comment

Leave a Reply

Your email address will not be published. Required fields are marked *