ಮುನಿರತ್ನ ರಾಜೀನಾಮೆ ನೀಡಿದ್ರೂ ಕುರುಕ್ಷೇತ್ರ ಸಿನಿಮಾ ಆಡಿಯೋ ರಿಲೀಸ್‍ಗೆ ಡಿಕೆಶಿ

Public TV
1 Min Read

– ಅವ್ರು ನನ್ನ ಜೊತೆಗಿದ್ದಾರೆ, ನಾನು ಅವ್ರ ಜೊತೆ ಇದ್ದೇನೆ

ಬೆಂಗಳೂರು: ಆರ್.ಆರ್.ನಗರ ಶಾಸಕ ಮುನಿರತ್ನ ರಾಜೀನಾಮೆ ನೀಡಿದರೂ ಅವರ ನಿರ್ಮಾಣದ ಕುರುಕ್ಷೇತ್ರ ಸಿನಿಮಾ ಆಡಿಯೋ ರಿಲೀಸ್‍ಗೆ ಸಚಿವ ಡಿ.ಕೆ.ಶಿವಕುಮಾರ್ ಆಗಮಿಸಿದ್ದಾರೆ.

ಕೋರಮಂಗಲ ಸ್ಟೇಡಿಯಂನಲ್ಲಿ ಕುರುಕ್ಷೇತ್ರ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮುಖ್ಯ ಅತಿಥಿಗಳು ಸಿಎಂ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಮುದ್ರಿಸಲಾಗಿತ್ತು. ಆದರೆ ಸರ್ಕಾರ ಉಳಿಸಿಕೊಳ್ಳುವಲ್ಲಿ ದೋಸ್ತಿಗಳ ಮಧ್ಯೆ ಅಸಲಿ ಕುರುಕ್ಷೇತ್ರ ನಡೆಯುತ್ತಿದೆ. ಹೀಗಾಗಿ ಅವರು ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆಗಳು ವಿರಳ ಎನ್ನಲಾಗುತ್ತಿದೆ.

ನಿರ್ಮಾಪಕ ಮುನಿರತ್ನ ಅವರು ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಸಹೋದರರ ಆಪ್ತರಾಗಿದ್ದಾರೆ. ಆಪ್ತರೇ ರಾಜೀನಾಮೆ ರಾಜೀನಾಮೆ ನೀಡಿ ಶಾಕ್ ಕೊಟ್ಟಿದ್ದರೂ ಸಚಿವರು ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಮುನಿರತ್ನ ನನ್ನ ಆತ್ಮೀಯ ಸ್ನೇಹಿತ. ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಸದ್ಯದ ರಾಜಕೀಯ ಬೆಳವಣಿಗೆ ಎಲ್ಲರಿಗೂ ಗೊತ್ತಿದೆ ಎಂದರು. ಶಾಸಕರ ಮನವೊಲಿಸುವ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುನಿರತ್ನ ನನ್ನ ಜೊತೆಗಿದ್ದಾರೆ. ನಾನು ಅವರ ಜೊತೆ ಇದ್ದೇನೆ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *