ಸಂಬಂಧ ಇಲ್ಲದೇ ಇರೋ ವಿಷಯದ ಬಗ್ಗೆ ನಾನು ಮಾತನಾಡಲ್ಲ: ಪ್ರೀತಮ್ ಗೌಡ

Public TV
1 Min Read

ಬೆಂಗಳೂರು: ಆಪರೇಷನ್ ಕಮಲದ ಆಡಿಯೋದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ವಿಕೆಟ್ ಉರುಳುತ್ತದೆ ಎನ್ನುವ ಹೇಳಿಕೆಗೆ ಬಿಜೆಪಿಯ ಹಾಸನ ಶಾಸಕ ಪ್ರೀತಮ್‍ ಗೌಡ ನಾನು ಏನು ಮಾತನಾಡಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರೀತಮ್ ಗೌಡ ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, “ನಾನು ಈ ಬಗ್ಗೆ ಮಾತನಾಡಲ್ಲ. ಮನೆ ಮೇಲೆ ದಾಳಿ ನಡೆದಿರುವ ವಿಷಯದ ಬಗ್ಗೆ ಮಾತನಾಡಿದ್ದೇನೆ. ದೇವೇಗೌಡರ ಹೇಳಿಕೆಯ ಆಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲ. ಸಂಬಂಧ ಇಲ್ಲದಿರುವ ವಿಷಯದ ಬಗ್ಗೆ ನಾನು ಮಾತನಾಡಲ್ಲ. ಮನೆ ಮೇಲೆ ದಾಳಿ ನಡೆದಿದೆ, ಅದಕ್ಕೆ ನಾನು ಏನೂ ಮಾಡಬೇಕೋ ಕಾನೂನಾತ್ಮಕವಾಗಿ ಮಾಡುತ್ತೇವೆ. ಗೂಂಡಾರಾಜ ಮಾಡುವುದಕ್ಕೆ ನನ್ನ ಸಹಮತ ಇಲ್ಲ. ಅವರು ಏನೇನು ಮಾಡಿದ್ದಾರೆ ಮುಂದೆ ನೋಡೋಣ” ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇವೇಗೌಡರ ವಿಕೆಟ್ ಉರುಳುತ್ತೆ ಎಂದ ಪ್ರೀತಮ್ ಗೌಡ ವಿರುದ್ಧ ಪ್ರತಿಭಟನೆ

ಪ್ರೀತಮ್‍ಗೌಡ ಹೇಳಿದ್ದೇನು?:
ಸೂರ್ಯ ಚಂದ್ರ ಇರುವವರೆಗೂ ರಾಷ್ಟ್ರೀಯ ಪಕ್ಷ ದೇಶದಲ್ಲಿ ಇರುತ್ತದೆ. ಮಾಜಿ ಪ್ರಧಾನಿ ದೇವೇಗೌಡರ ವಿಕೆಟ್ ಹೋಗುತ್ತೆ. ಸಿಎಂ ಕುಮಾರಸ್ವಾಮಿ ಆರೋಗ್ಯವೂ ಸರಿಯಿಲ್ಲ. ಇದರಿಂದಾಗಿ ಜೆಡಿಎಸ್ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತದೆ. ಮೈತ್ರಿ ಸರ್ಕಾರ ಈಗಂತೂ ಬಿದ್ದರೆ ಸಾಕು ಎನ್ನುವಂತಿದೆ. ನನಗೂ ಈಗ 35-36ನೇ ವಯಸ್ಸು, ಶಾಸಕನಾಗಿ ಇದ್ದೇನೆ. ನಿನಗೆ 30 ವರ್ಷವಾಗಿದೆ. ಇನ್ನೂ 40 ವರ್ಷ ರಾಜಕಾರಣ ಮಾಡಬೇಕು. ಎಲ್ಲಾ ಒಟ್ಟಿಗೆ ಇರೋಣ ಎಂದು ಅನಾಮಿಕ ವ್ಯಕ್ತಿಯ ಜೊತೆಗೆ ಫೋನಿನಲ್ಲಿ ಮಾತನಾಡಿರುವ ಆಡಿಯೋ ಈಗ ವೈರಲ್ ಆಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *