ತುಮಕೂರು: ಕುಣಿಗಲ್ನ ಶಾಸಕ ಡಾ.ರಂಗನಾಥ್ (Dr.Ranganath) ತನ್ನ ಕ್ಷೇತ್ರದ ಮತದಾರನಿಗೆ ಮೂಳೆ ಆಪರೇಷನ್ ಮಾಡಿದ್ದಾರೆ.
ಕುಣಿಗಲ್ (Kunigal) ತಾಲೂಕಿನ ಅಮೃತೂರು ಬಳಿಯ ದೊಡ್ಡಕಲ್ಲಹಳ್ಳಿ ಗ್ರಾಮದ ಪರಮೇಶ್ ಅವರಿಗೆ ಬೈಕ್ ಅಪಘಾತದಲ್ಲಿ ಮೂಳೆ ಮುರಿದಿತ್ತು. ಆರ್ಥಿಕ ಸಮಸ್ಯೆಯಿಂದ ಪರಮೇಶ್ ಚಿಕಿತ್ಸೆ ಪಡೆಯಲಾಗಿರಲಿಲ್ಲ. ಈ ಹಿನ್ನೆಲೆ ಅವರು ಶಾಸಕರನ್ನು ಭೇಟಿಯಾಗಿದ್ದರು. ಇದನ್ನೂ ಓದಿ: ಡಿಕೆಶಿ ಪರ ಕೆಲ ಶಾಸಕರ ಬೆಂಬಲ ಮಾತ್ರ ಇದೆ, 5 ವರ್ಷವೂ ನಾನೇ ಸಿಎಂ – ಡೆಲ್ಲಿಯಲ್ಲಿ ಸಿಎಂ ಗೂಗ್ಲಿ
ಕೂಡಲೇ ಶಾಸಕರು ಪರಮೇಶ್ರನ್ನು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಗೆ ದಾಖಲಿಸಿದ್ದರು. ವೃತ್ತಿಯಲ್ಲಿ ವೈದ್ಯರಾಗಿರುವ ರಂಗನಾಥ್ ಅವರು ಸ್ವತಃ ತಾವೇ ಮುಂದೆ ನಿಂತು ಭುಜದ ಮೂಳೆ ಆಪರೇಷನ್ ಮಾಡಿದ್ದಾರೆ. ಇದೀಗ ಶಾಸಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಕಾಡಾನೆ ದಾಳಿಯಿಂದ ರೈತನ ಕಾಲು ಮುರಿತ – ನಡುರಸ್ತೆಯಲ್ಲೇ ಮಲಗಿಸಿ ಪ್ರತಿಭಟಿಸಿದ ಗ್ರಾಮಸ್ಥರು