ಮ್ಯಾರಥಾನ್‌ನಲ್ಲಿ ಕುಸಿದು ಬಿದ್ದ ವ್ಯಕ್ತಿ – ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಶಾಸಕ ಸತೀಶ್ ಸೈಲ್

By
0 Min Read

ಕಾರವಾರ: ಮ್ಯಾರಥಾನ್ ವೇಳೆ ಕುಸಿದು ಬಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿ ಶಾಸಕ ಸತೀಶ್ ಸೈಲ್ ಮಾನವೀಯತೆ ಮೆರೆದಿದ್ದಾರೆ.

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾದಕ ವಸ್ತು ನಿಯಂತ್ರಣ ಜಾಗೃತಿಗಾಗಿ ಮ್ಯಾರಥಾನ್ ಆಯೋಜಿಸಲಾಗಿತ್ತು. ನಗರದ ಮಾಲಾದೇವಿ ಮೈದಾನದ ಬಳಿ ನೌಕಾದಳ ಉದ್ಯೋಗಿ ಗುರುಚರಣ್ ಕುಸಿದು ಬಿದ್ದರು.

ತಕ್ಷಣ ಅವರನ್ನು ಅಂಬುಲೆನ್ಸ್ನಲ್ಲಿ ಶಾಸಕ ಸೈಲ್ ಆಸ್ಪತ್ರೆಗೆ ಕರೆದುಕೊಂಡು ಹೋದರು. ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರನ್ನ ಕರೆಸಿ ಚಿಕಿತ್ಸೆಗೆ ಸಹಕರಿಸಿದರು. ಚಿಕಿತ್ಸೆ ನಂತರ ವ್ಯಕ್ತಿ ಚೇತರಿಸಿಕೊಂಡರು.

Share This Article