ಆಪರೇಷನ್ ಕಮಲ: 60 ಕೋಟಿ ಬಾಂಬ್ ಸಿಡಿಸಿದ ಜೆಡಿಎಸ್ ಶಾಸಕ ಶಿವಲಿಂಗೇಗೌಡ

Public TV
1 Min Read

ಹಾಸನ: ಪದೇ ಪದೇ ರಾಜ್ಯ ಸರ್ಕಾರ ಉರುಳಿಸುತ್ತಿರುವ ಪ್ರಯತ್ನವನ್ನು ರಾಷ್ಟ್ರೀಯ ಪಕ್ಷವಾಗಿ ಬಿಜೆಪಿ ಪ್ರಯತ್ನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಮಂಗಳವಾರ ರಾತ್ರಿ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಅವರು ನಮ್ಮ ಪಕ್ಷದ ತುಮಕೂರು ಗ್ರಾಮಾಂತರ ಶಾಸಕರಿಗೆ ದೂರವಾಣಿ ಕರೆ ಮಾಡಿ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ಕೆ.ಎಸ್ ಶಿವಲಿಂಗೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ಆಪರೇಷನ್ ಕಮಲ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಾಸನದ ಅರಸೀಕೆರೆ ಕ್ಷೇತ್ರದ ಶಾಸಕರಾದ ಗೌರಿಶಂಕರ್ ಅವರಿಗೆ ಫೋನ್ ಮಾಡಿ 60 ಕೋಟಿ ರೂ. ದುಡ್ಡು ಹಾಗೂ ಸಚಿವ ಸ್ಥಾನದ ನೀಡುವ ಕುರಿತು ಆಮಿಷ ಒಡ್ಡಿದ್ದಾರೆ. ಈ ಕುರಿತು ಸಿಎಂ ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡಿದ್ದೇನೆ. ಆದರೆ ನಮಗೆ 60 ಕೋಟಿ ರೂ. ಅಲ್ಲ, 500 ಕೋಟಿ ರೂ. ನೀಡಿದರೂ ಬಿಜೆಪಿಗೆ ಹೋಗಲ್ಲ ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಸಚಿವ ರೇವಣ್ಣ ಅವರು, ದೆಹಲಿಯಲ್ಲಿ ದಿನಕ್ಕೆ ಲಕ್ಷ ಲಕ್ಷ ರೂ. ನೀಡಿ ಬಿಎಸ್ ಯಡಿಯೂರಪ್ಪ ಅವರು, ಶಾಸಕರು ಇದ್ದಾರೆ. ಇದಕ್ಕಿಂತ ಆಪರೇಷನ್ ಕಮಲಕ್ಕೆ ಬೇರೆ ಯಾವ ಸಾಕ್ಷಿ ಬೇಕು ಎಂದು ಪ್ರಶ್ನೆ ಮಾಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *