ಪೌರಕಾರ್ಮಿಕರಂತೆ ಶಾಸಕಿ ಸೌಮ್ಯಾ ರೆಡ್ಡಿಯಿಂದ ಕಸ ಕ್ಲೀನ್!

Public TV
1 Min Read

ಬೆಂಗಳೂರು: ನೂತನವಾಗಿ ಆಯ್ಕೆಯಾಗಿರುವ ಜಯನಗರ ಶಾಸಕಿ ಸೌಮ್ಯರೆಡ್ಡಿಯವರು ಸ್ವತಃ ತಾವೇ ಸ್ವಚ್ಛ ಮಾಡುವ ಮೂಲಕ `ಸ್ವಚ್ಛ ಜಯನಗರ’ದ ಯೋಜನೆಗೆ ಚಾಲನೆ ನೀಡಿದ್ದಾರೆ.

ಜಯನಗರದ ಬೈರಸಂದ್ರ ವಾರ್ಡ್ ನ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಪೌರಕಾರ್ಮಿಕರಂತೆ ಕಸ ಕ್ಲೀನ್ ಮಾಡಿ, ಪಾದಚಾರಿ ರಸ್ತೆ ಮೇಲೆ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡವನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು.

ಶಾಸಕಿಯಾದ ಮರು ದಿನದಂದಲೇ ಜನರಿಗೆ ಹತ್ತಿರವಾಗುತ್ತಿರುವ ಸೌಮ್ಯರೆಡ್ಡಿಯವರು ಚುನಾವಣಾ ಪ್ರಚಾರದ ವೇಳೆ ನೀಡಿದ್ದ `ಸ್ವಚ್ಛ ಜಯನಗರ’ ಯೋಜನೆಗೆ ಇಂದು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು `ಸ್ವಚ್ಛ ಜಯನಗಕ್ಕೆ’ ಸಾರ್ವಜನಿಕರೆಲ್ಲರೂ ಸಹಕರಿಸಬೇಕು. ತಮ್ಮ ಮನೆಯಲ್ಲಿಯೇ ಕಸವನ್ನು ವಿಂಗಡನೆ ಮಾಡಿ ಪೌರಕಾರ್ಮಿಕರಿಗೆ ನೀಡಬೇಕು ಎಂದು ಮನವಿ ಮಾಡಿದರು. ಜಯನಗದ ಅಭಿವೃದ್ಧಿಗೆ ಬೇಕಾಗುವ ಯಾವುದೇ ಸಲಹೆ-ಸೂಚನೆಗಳನ್ನು ಮುಕ್ತವಾಗಿ ನಮ್ಮೊಂದಿಗೆ ಹಂಚಿಕೊಳ್ಳಬಹುದು ಎಂದು ಹೇಳಿದರು.

ಜಯನಗರದ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ಯಾವುದೇ ಸಮಸ್ಯೆಗಳಿದ್ದರೂ ಖುದ್ದು ನನ್ನ ದೂರವಾಣಿಗೆ ಕರೆ ಮಾಡಬಹುದು. ಇಲ್ಲವೇ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿ ಎಂದು ನಾಗರೀಕರಲ್ಲಿ ಸೌಮ್ಯಾ ರೆಡ್ಡಿ ಮನವಿ ಮಾಡಿಕೊಂಡರು. ಈಗಾಗಲೇ ಬಿಬಿಎಂಪಿ ಅಧಿಕಾರಿಗಳ ಜೊತೆ ಸೇರಿ ಫ್ಲೆಕ್ಸ್ ತೆರವು ಮಾಡಿಸುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *