ಆಶ್ಲೇಷ ಬಲಿ, ಮಹಾಭಿಷೇಕ ಸೇವೆ ನೆರವೇರಿಸಿದ ಶ್ರೀರಾಮುಲು

Public TV
1 Min Read

ಮಂಗಳೂರು: ದಕ್ಷಿಣ ಕನ್ನಡದ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಬಿ. ಶ್ರೀರಾಮುಲು ಭೇಟಿ ನೀಡಿದ್ದರು.

ಮೊಳಕಾಲ್ಮೂರು ಕ್ಷೇತ್ರದ ಶಾಸಕರಾಗಿರುವ ಶ್ರೀರಾಮುಲು ಅವರು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಹಾಗೂ ಮಹಾಭಿಷೇಕ ಸೇವೆ ನೆರವೇರಿಸಿದರು. ಅಲ್ಲದೇ ಮಧ್ಯಾಹ್ನದ ಮಹಾಪೂಜೆಯ ಬಳಿಕ ನಾಗಪ್ರತಿಷ್ಠೆ ಸೇವೆ ನಡೆಯಲಿದೆ. ಶ್ರೀರಾಮುಲುರಿಗೆ ಸ್ಥಳೀಯ ಬಿಜೆಪಿ ಮುಖಂಡರ ಸಾಥ್ ನೀಡಿದರು.

ಲಕ್ಷಾಂತರ ಮಂದಿಯ ಭಕ್ತರು ಪ್ರತಿ ವರ್ಷ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಾರೆ. ನಾಗ ಕ್ಷೇತ್ರವೆಂದೇ ಹೆಸರು ಪಡೆದಿರುವ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ ಸೇವೆ ಸೇರಿದಂತೆ 500ಕ್ಕೂ ಹೆಚ್ಚು ಸೇವೆಗಳನ್ನು ನಡೆಸಲಾಗುತ್ತದೆ. ವಿಶೇಷವಾಗಿ ಪ್ರತಿ ತಿಂಗಳ ಶುದ್ಧ ಷಷ್ಠಿ, ಏಕಾದಶಿ, ಇತ್ಯಾದಿ ಉಪವಾಸ ದಿನಗಳು ಮತ್ತು ವಾರ್ಷಿಕ ಜಾತ್ರಾ ಸಮಯ ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಆಶ್ಲೇಷ ಬಲಿ ಸೇವೆ ನಡೆಯುತ್ತದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *