ಮೈತ್ರಿ ಮಾಡೋದ್ರಲ್ಲಿ ಜೆಡಿಎಸ್ ಅವರೇ ಬೆಸ್ಟ್: ಸುಧಾಕರ್ ವ್ಯಂಗ್ಯ

Public TV
1 Min Read

ಚಿಕ್ಕಬಳ್ಳಾಪುರ: ಮೈತ್ರಿ ಮಾಡೋದ್ರಲ್ಲಿ ಜೆಡಿಎಸ್ ಅವರೇ ಬೆಸ್ಟ್, ಯಾರ ಜೊತೆ ಹೇಗೆ ಮೈತ್ರಿ ಮಾಡಿಕೊಳ್ಳೋದು ಅಂತ ಅವರಿಗೆ ಚೆನ್ನಾಗಿ ಗೊತ್ತಿದೆ ಅಂತ ಜೆಡಿಎಸ್ ಪಕ್ಷ ಹಾಗೂ ನಾಯಕರ ಬಗ್ಗೆ ಶಾಸಕ ಡಾ.ಕೆ ಸುಧಾಕರ್ ವ್ಯಂಗ್ಯವಾಡಿದ್ದಾರೆ.

ಜಿಲ್ಲೆಯ ನಗರಸಭೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಕೈ ತಪ್ಪಿರುವ ವಿಚಾರವಾಗಿ ಬೇಸರ ವ್ಯಕ್ತಪಡಿಸಿದರು. ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನೇ ಕೇಳಿರಲಿಲ್ಲ. ಆದ್ರೆ ನನ್ನ ಕ್ಷೇತ್ರದ ಒಬ್ಬರಿಗೆ ಹಾಗೂ ಜಿಲ್ಲೆಯಲ್ಲಿ ಬಾಗೇಪಲ್ಲಿ ಕ್ಷೇತ್ರದ ಶಾಸಕ ಸುಬ್ಬಾರೆಡ್ಡಿಗೆ ಅಧ್ಯಕ್ಷ ಸ್ಥಾನ ನೀಡುವಂತೆ ಪಕ್ಷದ ನಾಯಕರ ಬಳಿ ಮನವಿ ಮಾಡಿದ್ದೆ. ಆದ್ರೆ ಹೈಕಮಾಂಡ್ ನನಗೂ ಸಹ ಅಧ್ಯಕ್ಷ ಸ್ಥಾನ ಘೋಷಣೆ ಮಾಡಿತ್ತು. ಈಗ ಆ ಸ್ಥಾನವು ಕೈ ತಪ್ಪಿದೆ ಅಂದ್ರೆ ಅದಕ್ಕೆ ಹೈಕಮಾಂಡ್ ಉತ್ತರ ನೀಡಬೇಕು. ಯಾಕೆ ಏನು ಅಂತ ಜೆಡಿಎಸ್ ನವರ ಜೊತೆ ಹೈಕಮಾಂಡ್ ಚರ್ಚೆ ನಡೆಸಲಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಜೆಡಿಎಸ್ ಮೈತ್ರಿ ಧರ್ಮ ಪಾಲನೆ ಮಾಡ್ತಿದಿಯಾ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಧಾಕರ್ ಅವರು, ಮೈತ್ರಿ ಮಾಡೋದ್ರಲ್ಲಿ ಜೆಡಿಎಸ್ ಅವರೇ ಬೆಸ್ಟ್. ಯಾರ ಜೊತೆ ಹೇಗೆ ಮೈತ್ರಿ ಮಾಡಿಕೊಳ್ಳೋದು ಅಂತ ಅವರಿಗೆ ಚೆನ್ನಾಗಿ ಗೊತ್ತಿದೆ. ಅವರನ್ನ ಬಿಟ್ರೆ ಬೇರೆ ಯಾರು ಅಷ್ಟು ಚೆನ್ನಾಗಿ ಮೈತ್ರಿ ಮಾಡಲು ಆಗಲ್ಲ ಎಂದು ಹೇಳಿ ವ್ಯಂಗ್ಯ ಮಾಡಿದರು. ಅಲ್ಲದೆ ಇದು ಸಿಇಟಿ ಶ್ರೇಯಾಂಕ ಪಟ್ಟಿಯಂತೆ ಮೊದಲ ಲಿಸ್ಟ್ ಇರಬೇಕು, ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಬರಬಹುದೇನೋ ಅಂತ ನಗುತ್ತಲೇ ತಮ್ಮ ಬೇಸರ ಹೊರಹಾಕಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *