ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉಪಚುನಾವಣೆಯಿಂದ ದೂರವಿರಿ: ಶಾಸಕ ಸುಧಾಕರ್ ಟ್ವೀಟ್

Public TV
1 Min Read

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಉಪಚುನಾವಣೆಯಿಂದ ದೂರ ಇರಿ ಎಂದು ಶಾಸಕ ಸುಧಾಕರ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉಪಚುನಾವಣೆಯಿಂದ ದೂರವಿರಿ. ಮೂರು ಲೋಕಸಭಾ ಸ್ಥಾನಗಳ ಉಪಚುನಾವಣೆಯಿಂದ ದೂರವಿರಿ. 4-5 ತಿಂಗಳಲ್ಲಿ ಮುಖ್ಯ ಚುನಾವಣೆ ಬರುವಾಗ ಉಪಚುನಾವಣೆ ಯಾಕೆ ಬೇಕು? ಕೇಂದ್ರ ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಪ್ರತಿಭಟಿಸಬೇಕು. ಇದರಿಂದ ಖಜಾನೆಯ ಹಣ ಖಾಲಿಯಾಗಲಿದ್ದು ಇದೊಂದು ಪ್ರಜಾಪ್ರಭುತ್ವದ ಕುಣಿತ ಅಂತ ಟ್ವೀಟ್ ಮಾಡಿದ್ದಾರೆ.

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಉಪಚುನಾವಣೆ ಘೋಷಣೆ ಮಾಡಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.

ಬಳ್ಳಾರಿ, ಶಿವಮೊಗ್ಗ ಮತ್ತು ಮಂಡ್ಯ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3ರಂದು ನಡೆಯಲಿದ್ದು ನವೆಂಬರ್ 6 ರಂದು ಫಲಿತಾಂಶ ಪ್ರಕಟವಾಗಲಿದೆ. ಬಳ್ಳಾರಿ ಲೋಕಸಭೆ ಸದಸ್ಯರಾಗಿದ್ದ ಶ್ರೀರಾಮುಲು, ಶಿವಮೊಗ್ಗದ ಸಂಸದರಾಗಿದ್ದ ಬಿ.ಎಸ್. ಯಡಿಯೂರಪ್ಪ ಹಾಗೂ ಮಂಡ್ಯದಿಂದ ಆಯ್ಕೆಯಾಗಿದ್ದ ಪುಟ್ಟರಾಜು ಅವರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾದ ಹಿನ್ನೆಲೆಯಲ್ಲಿ ಈ ಉಪ ಚುನಾವಣೆ ನಡೆಯಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *