ಶಾಸಕರಾದ ನಂತ್ರ ಮೊದಲ ಬಾರಿ ನಾಡದೇವತೆ ದರ್ಶನ ಮಾಡಿದ್ರು ಯತೀಂದ್ರ ಸಿದ್ದರಾಮಯ್ಯ

Public TV
1 Min Read

ಮೈಸೂರು: ನೂತನ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಅರಮನೆ ನಗರಿಗೆ ಆಗಮಿಸಿದ್ದು, ಶಾಸಕರಾದ ನಂತರ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಹೆಚ್.ಡಿ.ಕೋಟೆ ನೂತನ ಶಾಸಕ ಅನಿಲ್‍ ಕುಮಾರ್ ಜೊತೆ ಯತೀಂದ್ರ ಸಿದ್ದರಾಮಯ್ಯ ಬೆಟ್ಟಕ್ಕೆ ಭೇಟಿ ನೀಡಿದ್ದು, ನಾಡದೇವತೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯತೀಂದ್ರ ಹಾಗೂ ಅನಿಲ್ ಸಾಕಷ್ಟು ರಾಜಕೀಯ ಬೆಳವಣಿಗೆಯಿಂದಾಗಿ ಕ್ಷೇತ್ರದಿಂದ ದೂರ ಉಳಿದಿದ್ದರು.

ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಸಿದ್ದರಾಮಯ್ಯ ಮಗ ಯತೀಂದ್ರ ಸಿದ್ದರಾಮಯ್ಯ ಮೈಸೂರಿನ ವರುಣ ಕೇತ್ರದಿಂದ ನಿಂತು ಗೆದ್ದಿದ್ದರು. ಆದ ಕಾರಣ ಇಂದು ಕ್ಷೇತ್ರದ ಹಳ್ಳಿಗಳಿಗೆ ಹೋಗಿ ಅಭಿನಂದನೆ ಸಲ್ಲಿಸಲಿದ್ದಾರೆ. ಕ್ಷೇತ್ರಕ್ಕೆ ತೆರಳುವ ಮುನ್ನ ಇಬ್ಬರು ನೂತನ ಶಾಸಕರಿಂದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಹೋಗಿ ಪೂಜೆ ಸಲ್ಲಿಸಿದ್ದಾರೆ.

ಚಾಮುಂಡಿಗೆ ಪೂಜೆ ಸಲ್ಲಿಸಿದ ಬಳಿಕ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ್ದು, ಸುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *