ಇಂದು ಮೂವರು ಅತೃಪ್ತ ಶಾಸಕರ ವಿಚಾರಣೆ

Public TV
1 Min Read

ಬೆಂಗಳೂರು: ಇಂದು ರಾಜೀನಾಮೆ ನೀಡಿರುವ ಅತೃಪ್ತ ಶಾಸಕರಲ್ಲಿ ಮೂವರು ಸ್ಪೀಕರ್ ರಮೇಶ್ ಕುಮಾರ್ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.

ರಾಜೀನಾಮೆ ಕ್ರಮ ಬದ್ಧವಾಗಿರುವ ಪ್ರತಾಪ್ ಗೌಡ ಪಾಟೀಲ್, ಆನಂದ್ ಸಿಂಗ್ ಮತ್ತು ನಾರಾಯಣಗೌಡ ಈ ಮೂವರು ವಿಚಾರಣೆಗೆ ಬರಬೇಕಿದೆ. ಇಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಸ್ಪೀಕರ್ ವಿಚಾರಣೆಯನ್ನು ನಡೆಸಲಿದ್ದಾರೆ.

ಕ್ರಮಬದ್ಧವಾಗಿ ಸಲ್ಲಿಸಿರುವ ಈ ಮೂವರು ಅತೃಪ್ತ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಯಾವ ರೀತಿ ವಿಚಾರಣೆ ಮಾಡಿ ರಾಜೀನಾಮೆಯನ್ನು ಅಂಗೀಕಾರ ಮಾಡುತ್ತಾರೋ ಅಥವಾ ಇನ್ನಷ್ಟು ದಿನ ಕಾಯಿಸುತ್ತಾರೋ ಅನ್ನೋದರ ಮೇಲೆ ಸಮ್ಮಿಶ್ರ ಸರ್ಕಾರ ಅಳಿವು ಉಳಿವು ನಿಂತಿದೆ ಎಂದು ಹೇಳಲಾಗುತ್ತದೆ.

ಮೊದಲಿಗೆ ಜುಲೈ 6 ಶನಿವಾರ ರಾಜೀನಾಮೆ ಸಲ್ಲಿಕೆಯಾಗಿತ್ತು. ಆದರೆ ಭಾನುವಾರ ರಜೆ, ಸೋಮವಾರ ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಸ್ಪೀಕರ್ ರಜೆಯಲ್ಲಿದ್ದರು. ಮಂಗಳವಾರ ರಾಜೀನಾಮೆ ಪತ್ರಗಳ ಪರಿಶೀಲನೆ ಪ್ರಕ್ರಿಯೆ ನಡೆಸಿ ಸರಿಯಾಗಿ ರಾಜೀನಾಮೆ ಸಲ್ಲಿಸಲಿಲ್ಲ. ಮತ್ತೆ ಬಂದು ರಾಜೀನಾಮೆ ಸಲ್ಲಿಸುವಂತೆ ಸೂಚಿಸಿದ್ದರು.

ಇತ್ತ ತಾವು ನೀಡಿದ್ದ ರಾಜೀನಾಮೆ ಅಂಗೀಕಾರ ನಿಧಾನವಾಗುತ್ತಿರುವ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರು ಸುಪ್ರೀಂ ಮೊರೆಹೋಗಿದ್ದರು. ಗುರುವಾರ ವಿಚಾರಣೆಯಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಸುಪ್ರೀಂ ನಿರ್ದೇಶನದಂತೆ 10 ಮಂದಿ ಅತೃಪ್ತ ಶಾಸಕರು ರಾಜೀನಾಮೆ ಸಲ್ಲಿಸಿದ್ದರು. ಇಂದು ಸ್ಪೀಕರ್ ರಮೇಶ್ ಕುಮಾರ್ ನಿರ್ಧಾರದ ಬಗ್ಗೆ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಇಂದಿನ ಅತೃಪ್ತ ಶಾಸಕರ ಕೇಸ್ ಹೊಸ ತೀರ್ಪಿಗೆ ನಾಂದಿಯಾಗುತ್ತಾ ಎಂಬುದನ್ನು ಕಾದು ನೋಡಬೇಕು.

Share This Article
Leave a Comment

Leave a Reply

Your email address will not be published. Required fields are marked *