ಅದಾನಿ ದುಡ್ಡನ್ನ ಮೋದಿ, ಬಿಜೆಪಿಯವರು ಹಂಚಿಕೊಳ್ತಿದ್ದಾರೆ: ಸಂತೋಷ್ ಲಾಡ್

Public TV
1 Min Read

ಬೆಂಗಳೂರು: ನಾನು ರಾಹುಲ್ ಗಾಂಧಿ (Rahul Gandhi) ದುಡ್ಡು ಕೊಡ್ತೀನಿ ಅಂತ ಆರೋಪ ಮಾಡುತ್ತಾರೆ. ಅದಾನಿ (Gautam Adani) ದುಡ್ಡನ್ನ ಮೋದಿ, ಬಿಜೆಪಿ ಅವರು ಹಂಚಿಕೊಳ್ಳುತ್ತಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.

ಕಾರ್ಮಿಕ ಇಲಾಖೆಯಲ್ಲಿ ಅಕ್ರಮ ಆರೋಪದ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಇಲಾಖೆಯಲ್ಲಿ ಯಾವುದೇ ಅಕ್ರಮ ಆಗಿಲ್ಲ. ಅಕ್ರಮದ ದಾಖಲಾತಿ ಕೊಟ್ಟರೆ ನಾನು ತನಿಖೆ ಮಾಡಿಸುತ್ತೇನೆ. ನಾನು ಮೋದಿ ವಿರುದ್ಧ ಮಾತನಾಡುತ್ತೇನೆ ಅಂತ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ದಾಖಲಾತಿಗಳು ಇದ್ದರೆ ಬಿಜೆಪಿ ಅವರು ಕೋರ್ಟ್‌ಗೆ ಹೋಗಲಿ. ಆರ್‌ಟಿಐ ಅನ್ನ ಈ ದೇಶದಲ್ಲಿ ಬಿಜೆಪಿ ಉಳಿಸಿದೆಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ವಿಜಯಪುರ | ಮಳೆಯಬ್ಬರಕ್ಕೆ ಮೈದುಂಬಿದ ಡೋಣಿ ನದಿ – ಸಾತಿಹಾಳ ಸೇತುವೆ ಜಲಾವೃತ

ಇವರು ಸುದ್ದಿಗೋಷ್ಟಿ ಮಾಡಿ ಆರೋಪ ಮಾಡಿದ ಕೂಡಲೇ ಸಿಬಿಐಗೆ ಕೊಡಬೇಕಾ? ಬಿಜೆಪಿ ಅವರು ದಾಖಲಾತಿ ಕೊಡಲಿ, ನಾನು ತನಿಖೆ ಮಾಡಿಸುತ್ತೇನೆ ಎಂದು ಸಂತೋಷ್ ಲಾಡ್ ತಿರುಗೇಟು ನೀಡಿದರು. ಇದನ್ನೂ ಓದಿ: ಕ್ಯಾಬಿನೆಟ್‌ನಲ್ಲಿ ನ್ಯಾ.ನಾಗಮೋಹನ್ ದಾಸ್ ವರದಿ ಮಂಡನೆ – ಆ.16ಕ್ಕೆ ವಿಶೇಷ ಸಂಪುಟ ಸಭೆ

Share This Article