ಕೊಲ್ಲೂರು ದೇವಸ್ಥಾನಕ್ಕೆ ಮೋದಿ ಸಹೋದರ ಭೇಟಿ

Public TV
1 Min Read

ಉಡುಪಿ: ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಭೇಟಿ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪೂಜೆ ಪುನಸ್ಕಾರ ನೆರವೇರಿಸಿದ್ದಾರೆ. ಅಲ್ಲದೆ ಇಂದು ಮುಂಜಾನೆ ಚಂಡಿಕಾ ಹೋಮದಲ್ಲಿ ಪಾಲ್ಗೊಂಡಿದ್ದಾರೆ.

ಪ್ರಹ್ಲಾದ್ ಮೋದಿ ಅವರು ಬಹುಕಾಲದಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಬೇಕು ಎಂದುಕೊಂಡಿದ್ದರು. ಆದರೆ ಇಂದು ಅವರು ದೇವಸ್ಥಾನಕ್ಕೆ ಆಗಮಿಸಿ ಚಂಡಿಕಾ ಹೋಮವನ್ನು ನಡೆಸಿದ್ದಾರೆ. ಈ ವೇಳೆ ದೇವಾಲಯದ ಇಓ ಕೃಷ್ಣಮೂರ್ತಿ ಅವರು ಪ್ರಹ್ಲಾದ್ ಮೋದಿಯನ್ನು ಗೌರವಿಸಿದ್ದಾರೆ.

ಪೂಜೆ ವೇಳೆ ಪ್ರಹ್ಲಾದ್ ಮೋದಿ ಅವರು ಸಾಂಪ್ರದಾಯಿಕ ಉಡುಗೆ (ಬಿಳಿ ಪಂಜೆ ಹಾಗೂ ಶಲ್ಯೆ) ಧರಿಸಿ ಪೂಜೆ ಹಾಗೂ ಚಂಡಿಕಾ ಹೋಮದಲ್ಲಿ ಭಾಗಿಯಾಗಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *