ಬೆಂಗ್ಳೂರಿಗೆ ಮೋದಿ ಆಗಮನ – BMTC, KSRTC ಬಸ್ ಸಂಚಾರ 2 ಗಂಟೆ ಸ್ಥಗಿತ

Public TV
1 Min Read

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಂದು ರಾಜಧಾನಿ ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ಗೆ ಬರುವ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರವನ್ನು 2 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ.

ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೂ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ರೈಲಿನೊಳಗಡೆಯೇ ವ್ಯಕ್ತಿಯ ಬರ್ಬರ ಹತ್ಯೆ

ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬರುವ ವಾಹನಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಜೊತೆಗೆ ಮೆಜೆಸ್ಟಿಕ್ ಬರುವ ಪ್ರಯಾಣಿಕರನ್ನು ಹತ್ತಿರದ ಬಸ್ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಹಿನ್ನಲೆ ಮೆಜೆಸ್ಟಿಕ್‌ಗೆ ಬರುವ ಬರುವ ಬಸ್ ಸಂಚಾರ 2 ಗಂಟೆ ಸ್ಥಗಿತ ಮಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಭಯಂಕರವಾಗಿ ಆಡಿದ್ರೂ ಭಾರತ ಸೋಲೋದಕ್ಕೆ ಅರ್ಹವಾಗಿತ್ತು- ಅಖ್ತರ್ ಟೀಕೆ

ಉಪ್ಪಾರಪೇಟೆ ಪೊಲೀಸ್ ಸ್ಟೇಷನ್ ನಿಂದ ಸಾರಿಗೆ ನಿಗಮಕ್ಕೆ ಮನವಿ ಮಾಡಲಾಗಿದೆ. ಹೀಗಾಗಿ ಪ್ರಯಾಣಿಕರು ಸಹಕರಿಸುವಂತೆ ಸಾರಿಗೆ ಇಲಾಖೆಯೂ ಮನವಿ ಮಾಡಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *