ಜುಲೈ 29ರ ಚಿಕ್ಕೋಡಿಯ ಮೋದಿ ಸಮಾವೇಶ ಮುಂದೂಡಿಕೆ

Public TV
1 Min Read

ಚಿಕ್ಕೋಡಿ: ಜಿಲ್ಲೆಯಲ್ಲಿ ಇದೇ ಜುಲೈ 29ರಂದು ನಡೆಯಬೇಕಿದ್ದ ಸಮಾವೇಶವನ್ನು ಮುಂದೂಡಲಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಾರೆ ಎಂದು ಹೇಳಲಾಗಿದ್ದು, ಇದೀಗ ಅವರು ರಾಜ್ಯ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

ಮಳೆ, ನೆರೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಚುನಾವಣೆಯ ಹಿನ್ನೆಲೆಯಲ್ಲಿ ಮೋದಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಸ್ಪಷ್ಟಪಡಿಸಿದ್ದಾರೆ.

ಜುಲೈ 29ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಿಕ್ಕೋಡಿಗೆ ಆಗಮಿಸಿ, ರೈತರ ಬೆಳೆಗೆ ಪ್ರೋತ್ಸಾಹ ಧನ ಘೋಷಣೆಯ ಹಿನ್ನೆಯಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದರು. ವಿಧಾನ ಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಚಿಕ್ಕೋಡಿ ಪ್ರಚಾರ ಕಾರ್ಯಕ್ರಮ ಆಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೀಗಾಗಿ ರೈತರ ಸಮಾವೇಶ ಚಿಕ್ಕೋಡಿಯಲ್ಲಿ ಮಾಡಲು ಪ್ರಧಾನಿ ನಿರ್ಧಾರ ಮಾಡಿದ್ದರು. ಆದ್ರೀಗ ದಿಢೀರ್ ರಾಜ್ಯ ಪ್ರವಾಸ ರದ್ದು ಮಾಡಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ರೈತರ 50 ಬೃಹತ್ ರ‍್ಯಾಲಿಗಳನ್ನು ನಡೆಸಲು ಮುಂದಾಗುತ್ತಿದ್ದಾರೆ ಎಂದು ವರದಿಯಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *