– ರಂಜಿತಾಳನ್ನು ಕೊಲೆ ಮಾಡಿ ತಾನೂ ನೇಣಿಗೆ ಶರಣಾದ ಆರೋಪಿ
ಕಾರವಾರ: ವಿಚ್ಛೇದಿತ ಮಹಿಳೆ ಮದುವೆಗೆ ಒಪ್ಪದಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಉತ್ತರ ಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರದಲ್ಲಿ (Yellapur) ಘಟನೆ ನಡೆದಿದೆ. ಯಲ್ಲಾಪುರದ ನಿವಾಸಿ ರಫೀಕ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತ ತನ್ನ ಪ್ರೇಯಸಿ, ವಿಚ್ಛೇದಿತ ಮಹಿಳೆ ರಂಜಿತಾ ಮಲ್ಲಪ್ಪ ಬನ್ಸೋಡೆಯನ್ನು ಹತ್ಯೆ ಮಾಡಿದ್ದ. ಇದನ್ನೂ ಓದಿ: ಅಕ್ರಮ ಸಂಬಂಧ – ಮದ್ವೆಗೆ ಒಪ್ಪದಿದ್ದಕ್ಕೆ ರಂಜಿತಾಳ ಕುತ್ತಿಗೆ ಇರಿದು ಹತ್ಯೆ; ರಫೀಕ್ ಎಸ್ಕೇಪ್
ಶನಿವಾರ ರಂಜಿತಾಳ ಕತ್ತು ಕೊಯ್ದು ರಫೀಕ್ ಹತ್ಯೆ ಮಾಡಿದ್ದ. ಬಳಿಕ ನಿಸರ್ಗ ಮನೆಯ ಹಿಂಭಾಗದ ಕಾಜಲ್ವಾಡ ಕಾಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
10 ವರ್ಷಗಳ ಹಿಂದೆ ರಂಜಿತಾ ವಿಚ್ಛೇದನ ಪಡೆದು ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ 5 ವರ್ಷದ ಮಗುವಿನೊಂದಿಗೆ ವಾಸವಾಗಿದ್ದಳು ಎನ್ನಲಾಗಿದೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ರಂಜಿತಾಳಿಗೆ ರಫೀಕ್ನ ಪರಿಚಯವಾಗಿತ್ತು. ಇಬ್ಬರ ಕುಟುಂಬಗಳ ನಡುವೆ ಸಹ ಒಳ್ಳೆಯ ಬಾಂಧವ್ಯ ಇದ್ದ ಕಾರಣ ರಫೀಕ್ ಆಗಾಗ ರಂಜಿತಾಳ ಮನೆಗೆ ಬಂದು ಹೋಗುತ್ತಿದ್ದ. ಈ ಮಧ್ಯೆ ರಫೀಕ್ ಮದುವೆಯಾಗುವಂತೆ ರಂಜಿತಾಳನ್ನ ಒತ್ತಾಯಿಸುತ್ತಿದ್ದ. ಅದಕ್ಕೆ ರಂಜಿತಾ ವಿರೋಧ ವ್ಯಕ್ತಪಡಿಸಿದ್ದಳು. ಇದನ್ನೂ ಓದಿ: Ballari Clash | ಮೃತ ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ನಗದು ಪರಿಹಾರ – ಮನೆ ಭರವಸೆ ಕೊಟ್ಟ ಜಮೀರ್
ರಂಜಿತಾಳ ಮಾತಿನಿಂದ ಕೋಪಗೊಂಡಿದ್ದ ರಫಿಕ್ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ರಂಜಿತಾಳನ್ನ ಅಡ್ಡಗಟ್ಟಿ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ರಂಜಿತಾ ಕೋಪದಿಂದ ಮದುವೆಗೆ ನಿರಾಕರಿಸಿದ ಹಿನ್ನೆಲೆ ರಫೀಕ್ ನಡು ರಸ್ತೆಯಲ್ಲೇ ಚಾಕುವಿನಿಂದ ಕತ್ತು ಕೊಯ್ದು ಪರಾರಿಯಾಗಿದ್ದ. ಪ್ರಕರಣ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

