ಮಲೆನಾಡ ಹೆಬ್ಬಾಗಿಲಿಗೆ ಕಾಲಿಟ್ಟ ಮಂಗನ ಕಾಯಿಲೆ

Public TV
1 Min Read

ಚಿಕ್ಕಮಗಳೂರು: ಮಲೆನಾಡಿಗರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆ ಭೀತಿ ಇದೀಗ ಮಲೆನಾಡ ಹೆಬ್ಬಾಗಿಲು ತರೀಕೆರೆಗೂ ಕಾಲಿಟ್ಟಿರುವ ಸಂಶಯ ಮೂಡಿದೆ.

ಕಳೆದೊಂದು ತಿಂಗಳ ಅವಧಿಯಲ್ಲಿ ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನಲ್ಲಿ ಒಟ್ಟು 9 ಮಂಗಗಳು ಮೃತಪಟ್ಟಿದ್ದು, ನಾಲ್ಕು ಮಾದರಿಯ ರಕ್ತವನ್ನು ಮೈಸೂರು, ಮಂಗಳೂರು, ಶಿವಮೊಗ್ಗ ಹಾಗೂ ಪುಣೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ತಾಲೂಕು ಹಾಗೂ ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಇದೀಗ ಮಲೆನಾಡ ಹೆಬ್ಬಾಗಿಲು ತರೀಕೆರೆ ತಾಲೂಕಿನ ಲಕ್ಕವಳ್ಳಿ ಸಮೀಪದ ಗೋಪಾಲ ಕಾಲೋನಿಯಲ್ಲೂ ಒಂದೇ ದಿನ ನರಳಿ-ನರಳಿ ದಿಢೀರನೇ ಎರಡು ಮಂಗಗಳು ಮೃತಪಟ್ಟರುವದರಿಂದ ಸುತ್ತಮುತ್ತಲಿನ ಜನರು ಆತಂಕಕ್ಕೀಡಾಗಿದ್ದಾರೆ. ಇದನ್ನೂ ಓದಿ: ಏನಿದು ಮಂಗನ ಜ್ವರ? ಕಾಯಿಲೆ ಹೇಗೆ ಬರುತ್ತೆ? ರೋಗ ಲಕ್ಷಣ ಏನು? ಚಿಕಿತ್ಸೆ ಹೇಗೆ- ಇಲ್ಲಿದೆ ಸಂಪೂರ್ಣ ಮಾಹಿತಿ

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ತಾಲೂಕು ವೈದ್ಯಾಧಿಕಾರಿ ಚಂದ್ರಶೇಖರ್ ಭೇಟಿ ನೀಡಿ, ಮಂಗಗಳ ರಕ್ತದ ಮಾದರಿಯನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಬಳಿಕ ಗ್ರಾಮದ ಸುತ್ತಲೂ ಔಷಧಿ ಸಿಂಪಡಿಸಿ, ಮಂಗಗಳನ್ನು ಸುಟ್ಟು ಹಾಕಿದ್ದಾರೆ. ಭದ್ರಾ ಡ್ಯಾಂ ತಪ್ಪಲಿನಲ್ಲಿರುವ ಲಕ್ಕವಳ್ಳಿ ಗ್ರಾಮದ ಸುತ್ತಲೂ ದಟ್ಟ ಅರಣ್ಯವಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *