ರಾಜ್ಯಕ್ಕೆ ಮುಂಗಾರು ಪ್ರವೇಶ – ಮುಂದಿನ 3, 4 ದಿನ ಭಾರೀ ಮಳೆ ಸಾಧ್ಯತೆ

Public TV
1 Min Read

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ರಾಜ್ಯಾದ್ಯಾಂತ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಇಂದು ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ವೇದಿಕೆ ಮೇಲೆಯೇ ಕುಸಿದು ಬಿದ್ದ ಕೆಕೆ – ಬಹುಭಾಷಾ ಖ್ಯಾತ ಗಾಯಕ ಹಠಾತ್ ನಿಧನ 

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರೀ ಮಳೆ ಬರಬಹುದು. ಮಳೆ ಜೊತೆಗೆ ಗುಡುಗು, ಸಿಡಿಲು, ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *