ರಾಜ್ಯದ 28 ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೊರತೆ – ಈವರೆಗೆ 26% ಮಾತ್ರ ಬಿತ್ತನೆ

Public TV
1 Min Read

ಬೆಂಗಳೂರು: ರಾಜ್ಯಕ್ಕೆ ಮಳೆ (Rain) ಕೊರತೆಯುಂಟಾಗಿದ್ದು, ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು (Farmers) ಕಂಗಾಲಾಗಿದ್ದಾರೆ.

ಕಳೆದ ಜೂನ್ ತಿಂಗಳಲ್ಲಿ ಬರೋಬ್ಬರಿ 56% ಮಳೆ ಕೊರತೆಯಾಗಿತ್ತು. ಜುಲೈ ತಿಂಗಳ ಮೊದಲ 11 ದಿನಗಳವರೆಗೆ 34% ಮಳೆ ಕೊರತೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 18%, ಉತ್ತರ ಒಳನಾಡಿನಲ್ಲಿ 55% ಮಳೆ ಕಡಿಮೆಯಾಗಿದೆ. ಉತ್ತರ ಒಳನಾಡಿನ 13 ಜಿಲ್ಲೆಗಳಲ್ಲಿ ಮಳೆಗೆ ಬರ ಬಂದಿದೆ. ಬಾಗಲಕೋಟೆ (Bagalkot) ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 77% ಮಳೆ ಕೊರತೆಯಾಗಿದೆ. ಮಲೆನಾಡಿನಲ್ಲಿ ವಾಡಿಕೆಗಿಂತ 74% ಮಳೆ ಕಡಿಮೆ ಬಿದ್ದಿದೆ. ಇದರಲ್ಲಿ ಮೂರು ಜಿಲ್ಲೆಯಲ್ಲಿ ಮಳೆ ಕೊರತೆ ಕಾಡಿದೆ.

ಇನ್ನೂ ಕೊಡಗು (Kodagu) ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 80% ಮಳೆ ಕೊರತೆಯಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ವಾಡಿಕೆಯ ಅರ್ಧದಷ್ಟೂ ಬಿತ್ತನೆ ಮಾಡಿಲ್ಲ. ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ. ಇದನ್ನೂ ಓದಿ: ಅಭಿವೃದ್ಧಿ ಕೆಲಸಕ್ಕಿಂತ ಗ್ಯಾರಂಟಿ ಈಡೇರಿಕೆಯೇ ನಮ್ಮ ಮೊದಲ ಆದ್ಯತೆಯಾಗಿತ್ತು: ಪರಮೇಶ್ವರ್

ಈ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆದಿದೆ. ಹವಾಮಾನ ಇಲಾಖೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಮಳೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಅಧಿವೇಶನದಲ್ಲಿ ಕೆಲಸಕ್ಕೆ ಬಾರದ ವಿಷಯಗಳೇ ಚರ್ಚೆಯಾಗ್ತಿದೆ – ಬಿಎಸ್‌ವೈ ಪುತ್ರ ಅಸಮಾಧಾನ

ಕಡಿಮೆ ಬಿತ್ತನೆ ಮಾಡಿರುವ ರಾಜ್ಯದ ಟಾಪ್ 5 ಜಿಲ್ಲೆಗಳು
ಬೆಂಗಳೂರು ಗ್ರಾಮಾಂತರ- 2%
ರಾಮನಗರ – 2%
ಕೋಲಾರ – 4%
ಬಳ್ಳಾರಿ – 5%
ಕೊಡಗು – 7%
ತುಮಕೂರು – 9%

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್