ಉಡುಪಿ: ನಗರದಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಇಂದಿನಿಂದ ಪುನರ್ವಸು ನಕ್ಷತ್ರ ಆರಂಭವಾಗಲಿದ್ದು, ಭಾರೀ ಮಳೆಯಾಗುತ್ತಿದೆ.
ಮುಂದಿನ ಮೂರು-ನಾಲ್ಕು ದಿನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯಿಂದ ಈ ಹಿಂದೆ ತಿಳಿಸಿತ್ತು. ಉಡುಪಿ, ಕಾರ್ಕಳ, ಕುಂದಾಪುರ ಮತ್ತು ಬೈಂದೂರಲ್ಲಿ ವಿಪರೀತ ಮಳೆಯಾಗುತ್ತಿದೆ.
ಉಡುಪಿ ನಗರದಲ್ಲೂ ಭಾರೀ ಮಳೆಯಾಗುತ್ತಿದ್ದು, ಜನಜೀವನ, ಸಂಚಾರ ಅಸ್ತವ್ಯಸ್ತವಾಗಿದೆ. ಒಂದು ವಾರದಿಂದ ಉಡುಪಿಯಲ್ಲಿ ಮಳೆ ಕಡಿಮೆಯಾಗಿತ್ತು. ಉಡುಪಿ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು ಮಳೆ ಮುಂದುವರಿಯಲಿದೆ. ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು, ನಾಡದೋಣಿ ಮೀನುಗಾರರು ಕಡಲಿಗಿಳಿಯದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.