ಪುತ್ತೂರು | ವಿಹರಿಸುತ್ತಿದ್ದ ಜೋಡಿಗೆ ಕಿರುಕುಳ – ನಿಂದಿಸಿ ವಿಡಿಯೋ ಹರಿಬಿಟ್ಟ ಪುಂಡರು

Public TV
1 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್‍ಗಿರಿ ಮುಂದುವರಿದಿದೆ. ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹರಿಸುತ್ತಿದ್ದ ಜೋಡಿಗೆ ಪಾನಮತ್ತನಾಗಿ ಬಂದ ಯುವಕರ ಗುಂಪು ಕಿರುಕುಳ ನೀಡಿದೆ.

ಜೋಡಿಯ ಫೋಟೋ, ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕಿರುಕುಳ ನೀಡಲಾಗಿದೆ. ಯುವತಿಯ ಹೆಲ್ಮೆಟ್ ಕಸಿದುಕೊಂಡು ಹಲ್ಲೆಗೆ ಯತ್ನ ಮಾಡಲಾಗಿದೆ. ಅಲ್ಲದೇ ಅವ್ಯಾಚ್ಯ ಶಬ್ಧಗಳಿಂದ ಪುಂಡರು ನಿಂದಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಅಪ್ರಾಪ್ತೆಯನ್ನು ಕರೆದೊಯ್ದು ಮದುವೆಗೆ ಯತ್ನ – ಆರೋಪಿ ಅರೆಸ್ಟ್

ಕಿಡಿಗೇಡಿಗಳಿಂದ ತಪ್ಪಿಸಿಕೊಂಡು ಜೋಡಿ ಬಚಾವ್ ಆಗಿದೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್‍ಗಿರಿಗೆ ಬ್ರೇಕ್ ಹಾಕಬೇಕು ಎಂದು ಜನ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ – ರಮೇಶ್‌ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್‌

Share This Article