ಹುಬ್ಬಳ್ಳಿ ರೈಲ್ವೆ, ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ

Public TV
1 Min Read

ಹುಬ್ಬಳ್ಳಿ/ಧಾರವಾಡ: ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ವಾಯುಸೇನೆ ವಾಯುದಾಳಿ ಮಾಡುವ ಮೂಲಕ ಉಗ್ರರ ಅಡಗುತಾಣ ಸಂಹಾರ ಮಾಡಿದ ನಂತರ ಕೇಂದ್ರ ಸರ್ಕಾರ ಆಯಾ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ವಾಣಿಜ್ಯನಗರಿಯ ನೈಋತ್ಯ ರೈಲ್ವೆ ವಲಯ ಕಚೇರಿ, ರೈಲ್ವೆ ನಿಲ್ದಾಣ ಮತ್ತು ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮೊದಲಿಗಿಂತಲೂ ಭದ್ರತೆ ದೃಷ್ಟಿಯಿಂದ ಹೆಚ್ಚಿನ ತಪಾಸಣೆ ಮಾಡಲಾಗುತ್ತಿದೆ.

ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಪ್ರವೇಶ ಪಡೆಯುತ್ತಿದ್ದಂತೆ ಪ್ರಯಾಣಿಕರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ತದನಂತರ ಸರಕು- ಸರಂಜಾಮುಗಳನ್ನು ಪ್ರತ್ಯೇಕವಾಗಿ ಪರೀಕ್ಷೆ ಮಾಡಲಾಗುತ್ತಿದೆ. ತಪಾಸಣೆ ಹಾಗೂ ಭದ್ರತೆಗಾಗಿ ಒಟ್ಟು 90 ಜನ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ.

ನೈಋತ್ಯ ರೈಲ್ವೆ ವಲಯ ಕಚೇರಿ ಹಾಗೂ ರೈಲ್ವೆ ನಿಲ್ದಾಣಕ್ಕೆ ರೈಲ್ವೆ ಪೊಲೀಸ್ ಇಲಾಖೆ ಹೆಚ್ಚಿನ ಭದ್ರತೆ ಒದಗಿಸಿದ್ದು, ಪ್ರಯಾಣಿಕರ ತಪಾಸಣೆಗೆ ಮುಂದಾಗಿದೆ. ಅನುಮಾನಸ್ಪದ ವ್ಯಕ್ತಿಗಳ ಮಾಹಿತಿ ಪಡೆಯುವ ಮುನ್ನೆಚ್ಚರಿಕೆ ಕ್ರಮವಾಗಿ ರೈಲ್ವೆ ನಿಲ್ದಾಣದ ಒಳ ಹೋಗುವ ಹಾಗೂ ಹೊರಗೆ ಬರುವ ಪ್ರಯಾಣಿಕರ ಮೇಲೆ ನಿಗಾ ಇಟ್ಟಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *