ಪತಿಯ ಕಿರುಕುಳಕ್ಕೆ ಬೇಸತ್ತು ತಾಯಿ-ಮಗಳು ಆತ್ಮಹತ್ಯೆಗೆ ಯತ್ನ

Public TV
1 Min Read

ಬೆಂಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತು ತಾಯಿ- ಮಗಳು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೆ.ಪಿ ಅಗ್ರಹಾರದಲ್ಲಿ ನಡೆದಿದೆ.

ಶಶಿಕಲಾ ಹಾಗೂ ಪಲ್ಲವಿ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ತಾಯಿ- ಮಗಳು. ಪತಿ ಮಹೇಶ್ ಕುಮಾರ್ ಮತ್ತು ಪತ್ನಿ ಶಶಿಕಲಾ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದೂರವಾಗಿದ್ದರು.

ಬುಧವಾರ ಮಗಳು ಪಲ್ಲವಿ ಜೊತೆಯಿದ್ದ ವೇಳೆ ಮನೆಗೆ ಬಂದ ರವಿಕುಮಾರ್ ಪತ್ನಿ ಶಶಿಕಲಾ ಮತ್ತು ಮಗಳು ಪಲ್ಲವಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದನು. ಇದರಿಂದ ಬೇಸತ್ತ ತಾಯಿ, ಮಗಳು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸದ್ಯ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *