9 ತಿಂಗಳ ಮಗನನ್ನು ಕೊಂದು ತಾಯಿ ನೇಣಿಗೆ ಶರಣು

Public TV
1 Min Read

ದಾವಣಗೆರೆ: ತಾಯಿಯೊಬ್ಬಳು ತನ್ನ 9 ತಿಂಗಳ ಮಗುವನ್ನು ಕೊಲೆಗೈದು ಬಳಿಕ ನೇಣಿಗೆ ಶರಣಾದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಜಗಳೂರು ಪಟ್ಟಣದ ಜೆಸಿಆರ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ನಿಖಿತಾ (25) ಹಾಗೂ ಅನೀಶ್ (9 ತಿಂಗಳು) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯನರನ್ನು ಮುಖ್ಯಮಂತ್ರಿ ಮಾಡಲು ಜೆಡಿಎಸ್ ಬಿಟ್ಟು ಬಂದೆ: ಸಿಎಂ ಇಬ್ರಾಹಿಂ

ಕೌಟುಂಬಿಕ ಕಲಹದಿಂದಾಗಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗುತ್ತಿದೆ. ತಾಯಿ ನಿಖಿತ ಮೊದಲು ಮಗನಿಗೆ ನೇಣು ಬಿಗಿದು ನಂತರ ತಾನು ಕೂಡ ನೇಣಿಗೆ ಶರಣಾಗಿದ್ದಾರೆ. ಒಂದು ವರ್ಷದ ಹಿಂದೆ ದಾವಣಗೆರೆ ಮೂಲದ ಎಂಜಿನಿಯರ್ ಮನೋಜ್ ಕುಮಾರ್‍ನೊಂದಿಗೆ ನಿಖಿತಾ ವಿವಾಹ ಆಗಿದ್ದರು. ನಿನ್ನೆ ತವರಿಗೆ ಬಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ನಿಖಿತಾ ತಂದೆ -ತಾಯಿಗಳಿಬ್ಬರು ಶಿಕ್ಷಕರು. ಬೆಳಗ್ಗೆ ತಂದೆ-ತಾಯಿ ಶಾಲೆಗೆ ಹೋದ ಬಳಿಕ ನಿಖಿತಾ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಜಗಳೂರು ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *