ಬೇರೆ ಮನೆ ಮಾಡಲು ಒಪ್ಪದ ಪತಿ -ಕಂದನನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ

Public TV
2 Min Read

ಭೋಪಾಲ್: ಬೇರೆ ಮನೆ ಮಾಡಲು ಒಪ್ಪದ ಪತಿ ವಿರುದ್ಧವಾಗಿ ಸಿಟ್ಟು ತೀರಿಸಿಕೊಳ್ಳಲು ತನ್ನ ಮೂರು ತಿಂಗಳ ಕಂದಮ್ಮನನ್ನು ತಾಯಿಯೇ ಕೊಂದು ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಸ್ವಾತಿ ತನ್ನ 3 ತಿಂಗಳ ಮಗಳನ್ನು ಹತ್ಯೆ ಮಾಡಿದ್ದಾಳೆ. ಅಕ್ಟೋಬರ್ 12 ರಂದು ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ. ಬಳಿಕ ಮಗು ಕಾಣೆಯಾಗಿದೆ ಎಂದು ಮನೆಯವರಿಗೆ ತಿಳಿಸಿದ್ದಾಳೆ. ಈ ಮಧ್ಯಪ್ರದೇಶದ ಉಜ್ಜಯಿನಿಯ ಕಚ್ರೋಡ್‍ನಲ್ಲಿ ನಡೆದಿದೆ.

ಕಾಣೆಯಾದ ಮಗುವಿಗಾಗಿ ಮನೆಯವರೆಲ್ಲ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಮಗು ಸಿಗದೇ ಇದ್ದಾಗ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪಕ್ರರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರುಮಾಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಮನೆ ಶೋಧದ ವೇಳೆ ಮೂರನೇ ಅಂತಸ್ತಿನಲ್ಲಿರುವ ನೀರಿನ ಟ್ಯಾಂಕರ್‌ನಲ್ಲಿ 3 ತಿಂಗಳ ಹೆಣ್ಣು ಮಗುವಿನ ಮೃತ ದೇಹ ಪತ್ತೆಯಾಗಿದೆ. ಆದರೆ ಕೊಲೆ ಮಾಡಿದ್ದು, ಯಾರು ಎಂಬುಂದು ಪೊಲೀಸರಿಗೆ ತಲೆ ನೋವಾಗಿತ್ತು. ಇದನ್ನೂ ಓದಿ:  2ರೂ. ಬೆಂಕಿ ಪೊಟ್ಟಣದಲ್ಲಿ 36 ಕಡ್ಡಿ ಬದ್ಲು 50 ಕಡ್ಡಿ

ಹಿನ್ನೆಲೆ ಏನು?:
ಮನೆಯಲ್ಲಿ ಒಟ್ಟು 4 ಮಂದಿ ಜೊತೆಯಾಗಿ ವಾಸವಿದ್ದರು, ಮಹಿಳೆ ಹಾಗೂ ಆಕೆಯ ಪತಿ, ಗಂಡನ ಅಪ್ಪ-ಅಪ್ಪಇವರೆಲ್ಲರೂ ಒಟ್ಟಿಗೆ ಇದ್ದರು. ಪೊಲೀಸರಿಗೆ ಎಲ್ಲರ ಮೇಲೆ ಅನುಮಾನ ಮೂಡಿತ್ತು. ಮಗು ಮೃತಪಟ್ಟ 10 ದಿನಗಳ ಕಾಲ ಪ್ರತಿದಿನ ತಾಯಿ ಠಾಣೆಗೆ ತೆರಳಿ ಮಗು ಹುಡುಕಿಕೊಂಡುವಂತೆ ಕಣ್ಣೀರು ಹಾಕುತ್ತಾ, ನನ್ನ ಮಗು ಸಿಗದೇ ಇದ್ದರೆ ನಾನು ಸತ್ತು ಹೋಗುತ್ತೇನೆ ಎಂದು ಹೇಳಿದ್ದಳು. ಇದನ್ನೂ ಓದಿ:  ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ!

ಮಗುವಿನ ಕುಟುಂಬಸ್ಥರನ್ನು ವಿಚಾರಣೆ ಮಾಡಿದ್ದಾರೆ. ಈ ವೇಳೆ ಮಗುವಿನ ತಾಯಿ ಮೋಬೈಲ್ ಫೋನ್ ಚೆಕ್ ಮಾಡಿದ್ದಾರೆ. ಆಗ ಗೂಗಲ್ ಹಾಗೂ ಯೂಟ್ಯೂಬ್‍ನಲ್ಲಿ ಮಗುವನ್ನು ಕೊಲ್ಲುವುದು ಹೇಗೆ ಎಂಬುದನ್ನು ತಾಯಿ ಸ್ವಾತಿ ಸರ್ಚ್ ಮಾಡಿರುವುದು ಕಂಡುಬಂದಿದೆ. ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ನಡೆಸುತ್ತಿದ್ದಂತೆ ನಡೆದ ಘಟನೆಯನ್ನೆಲ್ಲ ತಾಯಿ ಸ್ವಾತಿ ಹೇಳಿದ್ದಾಳೆ. ಪೊಲೀಸರ ಒಂದು ಕ್ಷಣ ದಂಗಾಗಿಹೋಗಿದ್ದಾರೆ. ಇದನ್ನೂ ಓದಿ:  ದಂಪತಿಯ ಹನಿ ಟ್ರ್ಯಾಪ್ ಬಲೆಗೆ ಬಿದ್ದ 300 ಮಂದಿ- ಒಂದೇ ವರ್ಷದಲ್ಲಿ 20 ಕೋಟಿ ಸುಲಿಗೆ!

ನಾನು ನನ್ನ ಗಂಡ ಸಪರೇಟ್ ಆಗಿ ಸಂಸಾರ ಮಾಡುವ ಕನಸು ಕಂಡಿದ್ದೇ, ತುಂಬಾ ಸಲ ಗಂಡನ ಬಳಿ ಬೇರೆ ಮನೆ ಮಾಡುವಂತೆ ಹೇಳಿದ್ದೆ. ಆದರೆ ಗಂಡ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ ಹೀಗಾಗಿ ಈ ರೀತಿಯ ಕೃತ್ಯ ಮಾಡಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾಳೆ. ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆನಂದ್ ಬರ್ಬರ ಕೊಲೆ

Share This Article
Leave a Comment

Leave a Reply

Your email address will not be published. Required fields are marked *