ಹೆರಿಗೆ ಬಳಿಕ ಹೊಟ್ಟೆ ನೋವು ತಾಳಲಾರದೆ ತಾಯಿ ಆತ್ಮಹತ್ಯೆ

Public TV
1 Min Read

– 10 ತಿಂಗ್ಳ ಮಗ್ಳನ್ನು ಡ್ರಂನಲ್ಲಿ ಮುಳುಗಿಸಿ ಕೊಲೆ
– ಮಗು ಅನಾಥ ಆಗುತ್ತೆ ಎಂಬ ಕಾರಣಕ್ಕೆ ಹತ್ಯೆ

ಚಿತ್ರದುರ್ಗ: ತಾಯಿಯೊಬ್ಬಳು ತನ್ನ ಹತ್ತು ತಿಂಗಳ ಹೆಣ್ಣು ಮಗುವನ್ನು ಡ್ರಂನಲ್ಲಿ ಮುಳುಗಿಸಿ ಕೊಂದು ಆಕೆಯೂ ಸಹ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಐನಳ್ಳಿ ಗ್ರಾಮದಲ್ಲಿ ನಡೆದಿದೆ.

ಆಶಾಬಾಯಿ (24) ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ. ಹೆರಿಗೆ ಬಳಿಕ ಆಶಾಬಾಯಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ನೋವು ಹಾಗೂ ತೀವ್ರ ಅನಾರೋಗ್ಯ ತಾಳಲಾರದೆ ಆತ್ಮಹತ್ಯೆ ನಿರ್ಧಾರ ಮಾಡಿದ್ದಳು.

ತಾನು ಸತ್ತರೆ ಮಗು ಅನಾಥ ಆಗುತ್ತೆ ಎಂಬ ಕಾರಣಕ್ಕೆ ಆಶಾ ತಮ್ಮ 10 ತಿಂಗಳ ಹೆಣ್ಣು ಮಗುವನ್ನು ಡ್ರಂನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ. ಬಳಿಕ ತಾನು ಸಹ ನೇಣಿಗೆ ಶರಣಾಗುವುದಾಗಿ ಡೆತ್ ನೋಟ್ ನಲ್ಲಿ ನಮೂದಿಸಿದ್ದಾಳೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಶಾ ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಡಿದ್ದಾಳೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಲಂಬಾಣಿಹಟ್ಟಿಯ ಹೇಮಂತ್ ಎಂಬವರ ಜೊತೆ ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಆಶಾ ಪ್ರೇಮ ವಿವಾಹ ಆಗಿದ್ದಳು.

ಈ ಸಂಬಂಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *