ಕೌಟುಂಬಿಕ ಕಲಹ ಶಂಕೆ – ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Public TV
2 Min Read

ಬಳ್ಳಾರಿ: ಮೂವರು ಮಕ್ಕಳೊಂದಿಗೆ ತಾಯಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ (Ballary) ಜಿಲ್ಲೆಯ ಕುರುಗೋಡು (Kurugodu) ತಾಲೂಕಿನ ಬರದನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಯಿ ಸಿದ್ದಮ್ಮ (30), ಮಕ್ಕಳಾದ ಅಭಿಗ್ನ (8), ಅವಣಿ (6) ಹಾಗೂ ಆರ್ಯ (4) ಮೃತರು. ಇದನ್ನೂ ಓದಿ: ಟರ್ಕಿಯಲ್ಲಿ 2 ಏರ್ ಬಲೂನ್ ಅವಘಡ- ಪೈಲಟ್ ಸಾವು, 31 ಪ್ರವಾಸಿಗರಿಗೆ ಗಾಯ

ಬೆಳಗಾವಿ (Belagavi) ಮೂಲದ ಸಿದ್ದಮ್ಮ, ಪತಿ ಕುಮಾರ್ ಹಾಗೂ ಮೂವರು ಮಕ್ಕಳೊಂದಿಗೆ ಕುರಿ ಮೇಯಿಸಲು ಬಳ್ಳಾರಿಗೆ ಬಂದಿದ್ದರು. ಸಿದ್ದಮ್ಮ ಕುಟುಂಬವು ಬರದನಹಳ್ಳಿಯ ರಾಘವೇಂದ್ರ ಎನ್ನುವವರ ಜಮೀನಿನಲ್ಲೇ ಕುರಿ ಕಟ್ಟಿ ಹಾಕುತ್ತಿದ್ದರು. ಇವರು ಪ್ರತಿ ವರ್ಷ ಬೇಸಿಗೆ ಸಂದರ್ಭದಲ್ಲಿ ಬಂದು, 3-4 ತಿಂಗಳು ಇಲ್ಲೇ ವಾಸ್ತವ್ಯ ಹೂಡುತ್ತಿದ್ದರು. ಇದನ್ನೂ ಓದಿ: ಜ್ವಾಲಾಮುಖಿ ಸ್ಫೋಟ – ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ವಾಪಸ್

ಸೋಮವಾರ ಸಿದ್ದಮ್ಮ ಮತ್ತು ಪತಿ ಕುಮಾರ್ ನಡುವೆ ಗಲಾಟೆ ಆಗಿದೆ ಎನ್ನಲಾಗಿದೆ. ಗಲಾಟೆ ಬಳಿಕ ಬೆಳಗ್ಗೆ ಸಿದ್ದಮ್ಮ ಮೂವರು ಮಕ್ಕಳ ಸಮೇತ ಕುರಿ ಮೇಯಿಸಲು ಹೋಗಿದ್ದರು. ಕುರಿ ಮೇಯಿಸಲು ಹೋದಾಗಲೇ ಮಕ್ಕಳ ಸಮೇತ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಮಕ್ಕಳನ್ನ ಕೃಷಿ ಹೊಂಡಕ್ಕೆ ತಳ್ಳಿ, ಬಳಿಕ ಸಿದ್ದಮ್ಮ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಸಾವು ಗೆದ್ದು ಬಂದಿದ್ದ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಕುರಿಗಳು ಹಟ್ಟಿಗೆ ಬಾರದೇ ಇದ್ದುದ್ದರಿಂದ ಅನುಮಾನಗೊಂಡು ಪತಿ ಕುಮಾರ್ ಹುಡುಕಾಟ ನಡೆಸಿದ್ದರು. ಈ ವೇಳೆ ಕೃಷಿ ಹೊಂಡದ ಬಳಿಯೇ ನಿಂತಿದ್ದ ಕುರಿಗಳನ್ನ ಕಂಡು ಗಾಬರಿಗೊಂಡಿದ್ದರು. ಪತ್ನಿ ಹಾಗೂ ಮಕ್ಕಳು ಕಾಣದೇ ಇದ್ದಾಗ ಕೃಷಿ ಹೊಂಡದಲ್ಲಿ ಇಣುಕಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಗಾಬರಿಗೊಂಡ ಪತಿ ಕುಮಾರ್ ಕೂಡಲೇ ಸಂಬಂಧಿಕರಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಏನಿಲ್ಲ ಏನಿಲ್ಲ ಅನ್ನುತ್ತಲೇ ಒಂದೇ ಕಾರ್‌ನಲ್ಲಿ ಹೊರಟ ರಶ್ಮಿಕಾ, ದೇವರಕೊಂಡ

ಘಟನಾ ಸ್ಥಳಕ್ಕೆ ಕುರುಗೋಡು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೃತ ಸಿದ್ದಮ್ಮಳ ಸಹೋದರ ನೀಡಿದ ದೂರಿನನ್ವಯ ಕುರುಗೋಡು ಪೊಲೀಸ್ ಠಾಣೆಯಲ್ಲಿ (Kurugodu Police Station) ಪ್ರಕರಣ ದಾಖಲಾಗಿದೆ.

Share This Article