ಚಲಿಸುತ್ತಿದ್ದ KSRTC ಬಸ್ ಟೈರ್ ಸ್ಫೋಟಗೊಂಡು ಅಪಘಾತ

Public TV
1 Min Read

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮುಂಭಾಗದ ಟೈರ್ ಸ್ಫೋಟಗೊಂಡು ಬಸ್ ಅಪಘಾಕ್ಕೀಡಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ರ ಐಟಿಐ ಕಾಲೇಜು ಬಳಿ ನಡೆದಿದೆ.

ದೊಡ್ಡಬಳ್ಳಾಪುರ ನಗರದಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಅನಂತಪುರಕ್ಕೆ ತೆರಳುತ್ತಿತ್ತು. ಈ ವೇಳೆ ಕೆಎಸ್‌ಆರ್‌ಟಿಸಿ ಬಸ್‍ನ ಟೈರ್ ಸ್ಫೋಟಗೊಂಡಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಅಲ್ಲದೆ ಬಸ್ ರಸ್ತೆ ಬದಿ ನಿರ್ಮಿಸಲಾಗಿದ್ದ ಜಾಹೀರಾತು ನಾಮಫಲಕದ ಕೆಳಗೆ ಇದ್ದ ಖಾಲಿ ಕಂಟೈನರ್ ಗೆ ಗುದ್ದಿದೆ. ಪರಿಣಾಮ ಕಂಟೈನರ್ ಮನೆಗೆ ಡಿಕ್ಕಿಗೆ ಹೊಡೆದಿದೆ.

ಇದರಿಂದ ಬಸ್‍ನ ಮುಂಭಾಗ ಜಖಂಗೊಂಡಿದ್ದು ಚಾಲಕ, ನಿರ್ವಾಹಕ ಹಾಗೂ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಾಗೇಪಲ್ಲಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *