ಕೇಂದ್ರ ಸರ್ಕಾರದ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಾಗಿ ಡಾ.ಕೆ ಸುಧಾಕರ್ ನೇಮಕ

Public TV
1 Min Read

– 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಗಾಗಿ ಅಳಿಲು ಸೇವೆ ಸಲ್ಲಿಸುತ್ತೇನೆಂದ ಸಂಸದ

ಚಿಕ್ಕಬಳಾಪುರ: ಸಂಸದ ಡಾ.ಕೆ ಸುಧಾಕರ್‌ ಅವರಿಗೆ ಕೇಂದ್ರ ಸರ್ಕಾರವು (Union Government) ಪ್ರಮುಖ ಹೊಣೆಗಾರಿಕೆ ವಹಿಸಿದೆ. ಕೇಂದ್ರ ಸರ್ಕಾರದಿಂದ ಹೊಸದಾಗಿ ಸಂಸದೀಯ ಸ್ಥಾಯಿ ಸಮಿತಿಗಳಿಗೆ ನೇಮಕಾತಿ ನಡೆದಿದ್ದು, ಈ ಪೈಕಿ ಡಾ.ಕೆ ಸುಧಾಕರ್‌ (Dr. K Sudhakar) ಅವರನ್ನು ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಡಾ.ಕೆ ಸುಧಾಕರ್‌ ಅವರು ಮೊದಲ ಬಾರಿಗೆ ಸಂಸದರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲೇ ಅವರನ್ನು ಸ್ಥಾಯಿ ಸಮಿತಿಗೆ ನೇಮಿಸಿ ಮಹತ್ವದ ಹೊಣೆ ವಹಿಸಲಾಗಿದೆ. ಈ ಕುರಿತು ಸಂಸದ ಡಾ.ಕೆ ಸುಧಾಕರ್‌ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಹಾಲಕ್ಷ್ಮಿ ಕೊಲೆ ಬಳಿಕ ಬೆಂಗಳೂರಿನಿಂದ ಒಡಿಶಾಗೆ ಬೈಕ್‌ನಲ್ಲೇ ಪ್ರಯಾಣ – ಮೂರು ದಿನ 1,550 ಕಿಮೀ ಬೈಕ್ ಓಡಿಸಿದ್ದ ಹಂತಕ!

ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ (Finance Committee) ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಮತ್ತು ಸಂತಸದ ವಿಷಯ. ಈ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ಹಿರಿಯ ನಾಯಕರಾದ ಅಮಿತ್‌ ಶಾ ಹಾಗೂ ಬಿ.ಎಲ್‌.ಸಂತೋಷ್‌ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ.

2025ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷೆಯ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ನನ್ನದೇ ಆದ ಅಳಿಲು ಸೇವೆ ಸಲ್ಲಿಸಲು ಉತ್ಸುಕನಾಗಿದ್ದೇನೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಕಲಿ ಪಾಸ್‌ಪೋರ್ಟ್‌ ಬಳಸಿ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪೋರ್ನ್‌ ಸ್ಟಾರ್‌ ಬಂಧನ

Share This Article