ಎಸ್‍ಪಿ ರವಿ ಚೆನ್ನಣ್ಣನವರ್ ಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷ ಟಾಂಗ್

Public TV
1 Min Read

ಮೈಸೂರು: ಹುಣಸೂರು ಹನುಮ ಜಯಂತಿ ಮೆರವಣಿಗೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಎಸ್‍ಪಿ ರವಿ ಚೆನ್ನಣ್ಣನವರ್ ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, ಆಳುವವರ ಅಣತಿ ಮೀರುವ ಹಾಗಿಲ್ಲ ಅಲ್ವಾ ಸಾರ್ ಅಂತ ಟ್ವಿಟರ್‍ನಲ್ಲಿ ಎಸ್‍ಪಿ ಗೆ ಪರೋಕ್ಷವಾಗಿ ಪ್ರಶ್ನೆ ಮಾಡಿದ್ದಾರೆ. ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಅಳುವ ಪಕ್ಷದ ಆಳುಗಳು ಎನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿದ ಎಸ್.ಪಿ ಅಣ್ಣಾಮಲೈ, ಸರ್ಕಾರವನ್ನು ಎದುರು ಹಾಕಿಕೊಂಡ ಡಿಐಜಿ ರೂಪಾ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ. ಭಾಷಣ ನಿಲ್ಲಿಸಿ ಅಂತ ಟ್ವೀಟ್ ಮಾಡಿದ್ದಾರೆ. ನನ್ನ ರಾಜಕೀಯ ಭವಿಷ್ಯಕ್ಕಿಂತ ನನ್ನ ಧರ್ಮ, ಸಂಪ್ರದಾಯ ರಕ್ಷಣೆ ನನಗೆ ಮುಖ್ಯ ಅಂತ ಪ್ರತಾಪ್ ಸಿಂಹ ಹೇಳಿದ್ದಾರೆ.

12 ಗಂಟೆ ಬಳಿಕ ರಿಲೀಸ್: ಭಾನುವಾರ ಕಾರಿನಲ್ಲಿ ಬ್ಯಾರಿಕೇಡ್ ಗೆ ಗುದ್ದಿ ಜಿಲ್ಲಾಡಳಿತದ ಆದೇಶ ಧಿಕ್ಕರಿಸಿ ಉದ್ಧಟತನ ಪ್ರದರ್ಶನ ಮಾಡಿದ್ದಕ್ಕೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಹುಣಸೂರು, ಹೆಚ್.ಡಿ.ಕೋಟೆ, ಕೆ.ಆರ್.ನಗರ, ಮೈಸೂರು, ನರಸೀಪುರ ಸೇರಿದಂತೆ ಮೊದಲಾದ ಕಡೆ ಸುಮಾರು 8 ಗಂಟೆ ಕಾಲ ರೌಂಡ್ ಹೊಡೆಸಿದ ನಂತರ ರಾತ್ರಿ 11 ಗಂಟೆ ಹೊತ್ತಿಗೆ ಟೀ ನರಸೀಪುರ ಪಟ್ಟಣ ಠಾಣೆಗೆ ಕರೆತಂದಿದ್ದರು. ಅಲ್ಲಿ ಪ್ರತಾಪ್ ಸಿಂಹ ಸ್ಟೇಷನ್ ಬೇಲ್ ಪಡೆದು ರಿಲೀಸ್ ಆಗಿದ್ದಾರೆ.

ನಂತರ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ನಿಮಗೆ ನಿಮ್ಮ ಅಹಂ ದೊಡ್ಡದಾಗಿತ್ತು. ಆದರೆ ಅದು ನಿಮ್ಮ ಮನಸ್ಥಿತಿಯಲ್ಲಿರುವ ಲೋಪ. ಅದನ್ನು ಅಡ್ಡ ತಂದು ನಮ್ಮ ಮೇಲೆ ಗಧಾಪ್ರಹಾರ ಮಾಡಬೇಡಿ. 2015ರಲ್ಲಿ ನೀವು ಬ್ಯಾನ್ ಮಾಡಿದ 3 ರಸ್ತೆಯಲ್ಲಿ ಸುಸೂತ್ರವಾಗಿ ಹನುಮ ಜಯಂತಿ ನಡೆದಿತ್ತು. ಆದರೆ ಇದೀಗ ಅವಕಾಶವೇ ಕೊಡುತ್ತಿಲ್ಲ. ನಾನೊಬ್ಬ ಸಂಸದನಾಗಿ ಹುಣಸೂರಿಗೆ ಹೋಗಿ ಕಾನೂನು ಉಲ್ಲಂಘನೆ ಮಾಡುತ್ತೀನಿ ಎಂದು ನಿಮಗೆ ಕನಸು ಬಿದ್ದಿತ್ತಾ ಎಂದು ಸರ್ಕಾರವನ್ನ ಪ್ರಶ್ನೆ ಮಾಡಿದ್ರು.

Share This Article
1 Comment

Leave a Reply

Your email address will not be published. Required fields are marked *