ಮೋದಿಗೆ ದೇಶವನ್ನು ಮುನ್ನಡೆಸುವ ಅನುಭವದ ಕೊರತೆಯಿದೆ- ಸಂಸದೆ ರೇಣುಕಾ ಚೌಧರಿ

Public TV
1 Min Read

ರಾಯಚೂರು: ಪ್ರಧಾನಿ ಮೋದಿ ಅವರಿಗೆ ದೇಶವನ್ನು ಮುನ್ನಡೆಸುವ ಅನುಭವದ ಕೊರತೆಯಿದೆ. ಅದರಿಂದಾಗಿಯೇ ದೇಶ ಆರ್ಥಿಕ ದುಸ್ಥಿತಿಗೆ ತಲುಪಿದೆ ಅಂತ ಕಾಂಗ್ರೆಸ್ ಹಿರಿಯ ಮುಖಂಡೆ ಹಾಗೂ ಮಾಜಿ ಸಂಸದೆ ರೇಣುಕಾ ಚೌಧರಿ ಆರೋಪಿಸಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲಾಗುತ್ತಿರುವ ದೌರ್ಜನ್ಯಕ್ಕೆ ಕೇಂದ್ರ ಸರ್ಕಾರ ನೇರ ಹೊಣೆ ಅಂತ ಸಂಸದೆ ಆರೋಪಿಸಿದ್ದಾರೆ.

ಪ್ರಧಾನಿ ಹುದ್ದೆಗೆ ತಕ್ಕಂತೆ ಮೋದಿ ವರ್ತನೆಯಿಲ್ಲ. ರಾಜ್ಯದ ಚುನಾವಣೆಯಲ್ಲಿ ಪ್ರಚಾರಕರಂತೆ ಮಾತನಾಡುತ್ತಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಮಕ್ಕಳ ಮೇಲೆ ದಾಳಿ ಬಗ್ಗೆ ಪ್ರಧಾನಿಗೆ ಕಾಳಜಿಯಿಲ್ಲ. ದೇಶದಲ್ಲಿನ ಎಲ್ಲಾ ಅಹಿತಕರ ಘಟನೆ ಬದಿಗಿರಿಸಿ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ದೇಶದ ಆಗುಹೋಗುಗಳ ಬಗ್ಗೆ ಕಾಳಜಿಯಿಲ್ಲ ಎಂದು ಕಿಡಿಕಾರಿದರು.

Share This Article
Leave a Comment

Leave a Reply

Your email address will not be published. Required fields are marked *