ಇಂದೂ ರಾಜ್ಯದಲ್ಲಿ ನಾಮಿನೇಷನ್ ಭರಾಟೆ – ಉಡುಪಿಯಲ್ಲಿ ಪಕ್ಷೇತರರಾಗಿ ಕಣಕ್ಕಿಳಿಯಲಿದ್ದಾರೆ ಶಿರೂರು ಶ್ರೀ

Public TV
1 Min Read

ಬಳ್ಳಾರಿ: ಮೊಳಕಾಲ್ಮೂರಿನಲ್ಲಿ ಸಂಸದ ಶ್ರೀರಾಮುಲು, ಬಳ್ಳಾರಿಯಲ್ಲಿ ಸೋಮಶೇಖರ ರೆಡ್ಡಿ, ಸಣ್ಣ ಫಕ್ಕೀರಪ್ಪ, ಉಡುಪಿಯಲ್ಲಿ ಪಕ್ಷೇತರರಾಗಿ ಶಿರೂಶ್ರೀಗಳು ಸೇರಿದಂತೆ ಹಲವರು ನಾಮಪತ್ರ ಸಲ್ಲಿಸಲಿದ್ದಾರೆ.

ಶ್ರೀರಾಮುಲು ನಾಮಪತ್ರ ಸಲ್ಲಿಕೆ ವೇಳೆ ಯಡಿಯೂರಪ್ಪ, ಎಂಪಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಜನಾರ್ದನರೆಡ್ಡಿ ಸೇರಿದಂತೆ ಹಲವು ಹಿರಿ ನಾಯಕರು ಉಪಸ್ಥಿತರಿರಲಿದ್ದಾರೆ.

ಮೊಳಕಾಲ್ಮೂರಿನಲ್ಲಿ ಹೆಲಿಕಾಪ್ಟರ್ ಇಳಿಸಲು ಚುನಾವಣಾಧಿಕಾರಿಗಳು ಇನ್ನೂ ಅವಕಾಶ ನೀಡಿಲ್ಲ. ಇದು ಬಿಜೆಪಿ ನಾಯಕರಿಗೆ ತಲೆಬಿಸಿಯಾಗಿದೆ. ಶ್ರೀರಾಮುಲು ನಾಮಪತ್ರ ಸಲ್ಲಿಕೆಗೆ ಮುನ್ನ ಚಿತ್ರದುರ್ಗದ ಎಲ್ಲಾ ಮಠಗಳಿಗೆ ಭೇಟಿ ನೀಡಲಿದ್ದಾರೆ. ನಂತ್ರ ಸಾವಿರಾರು ಕಾರ್ಯಕರ್ತರ ಜೊತೆ ರೋಡ್ ಶೋ ಮೂಲಕ ಮೊಳಕಾಲ್ಮೂರಿಗೆ ತೆರಳಿ ನಾಮಿನೇಷನ್ ಫೈಲ್ ಮಾಡಲಿದ್ದಾರೆ. ಈ ಮೂಲಕ ಗಲಾಟೆ ಮಾಡಿಸಿದ್ದ ತಿಪ್ಪೇಸ್ವಾಮಿಗೆ ತಿರುಗೇಟು ನೀಡಲಿದ್ದಾರೆ.

ಶ್ರೀರಾಮುಲು ಬಳ್ಳಾರಿ ನಿವಾಸದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಬೆಳಗ್ಗೆಯಿಂದಲೇ ನಡೆಯುತ್ತಿವೆ.

Share This Article
Leave a Comment

Leave a Reply

Your email address will not be published. Required fields are marked *