ಬಳ್ಳಾರಿ ಗ್ರಾಮೀಣ ಅಥವಾ ಕೂಡ್ಲಗಿಯಿಂದ ಕಣಕ್ಕಿಳಿಯಲಿದ್ದಾರೆ ಸಂಸದ ಶ್ರೀರಾಮುಲು!

Public TV
1 Min Read

ಬಳ್ಳಾರಿ: ಸಂಸದ ಬಿ.ಶ್ರೀರಾಮುಲು ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.

ಬಳ್ಳಾರಿ ಗ್ರಾಮೀಣ, ಕೂಡ್ಲಗಿ ಇಲ್ಲವೇ ಸಂಡೂರಿನಿಂದ ಶ್ರೀರಾಮುಲು ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ. ಹೀಗಾಗಿ ರಾಮುಲು ವಿರುದ್ಧ ಕಾಂಗ್ರೆಸ್‍ನಿಂದ ಎದುರಾಳಿಯಾಗಿ ಕಣಕ್ಕೆ ಯಾರು ಇಳಿಯಲಿದ್ದಾರೆ ಅನ್ನೋದು ಇದೀಗ ಕುತೂಹಲ ಮೂಡಿಸಿದೆ.

ಶ್ರೀರಾಮುಲು ಅವರನ್ನು ಬಳ್ಳಾರಿ ಗ್ರಾಮೀಣ ಇಲ್ಲವೇ ಕೂಡ್ಲಗಿಯಿಂದ ಕಣಕ್ಕೆ ಇಳಿಸಿದ್ರೆ ರಾಮುಲು ವಿರುದ್ಧ ಕಾಂಗ್ರೆಸ್‍ನಿಂದ ಬಿ.ನಾಗೇಂದ್ರ ಸ್ಪರ್ಧೆ ಮಾಡುವುದು ಖಚಿತ ಎನ್ನುವಂತಾಗಿದೆ. ಶ್ರೀರಾಮುಲು ಬಲಗೈ ಬಂಟನಾಗಿ ಬೆಳೆದ ಕೂಡ್ಲಗಿ ಶಾಸಕ ನಾಗೇಂದ್ರ ಇತ್ತೀಚೆಗಷ್ಟೇ ರೆಡ್ಡಿ- ರಾಮುಲು ಸಂಪರ್ಕ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಹಿನ್ನಲೆಯಲ್ಲಿ ಅವರನ್ನೇ ಕಣಕ್ಕೆ ಇಳಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ ಎಂದು ಪಕ್ಷ ಮೂಲಗಳಿಂದ ತಿಳಿದುಬಂದಿದೆ.

ಒಂದೇ ಒಂದೂ ಚುನಾವಣೆಯಲ್ಲೂ ಸೋಲು ಕಂಡರಿಯದ ಶ್ರೀರಾಮುಲುಗೆ ಸೆಡ್ಡು ಹೊಡೆಯಲು ನಾಗೇಂದ್ರರೇ ಸೂಕ್ತ ಅಭ್ಯರ್ಥಿ ಎಂದು ಕಾಂಗ್ರೆಸ್ ಅವರನ್ನೇ ಕಣಕ್ಕೆ ಇಳಿಸಲು ಮುಂದಾಗಿದ್ದು, ಒಟ್ಟಿನಲ್ಲಿ ಈ ಬಾರಿಯ ಚುನಾವಣೆ ಬಳ್ಳಾರಿಯಲ್ಲಿ ಭಾರೀ ಪೈಪೋಟಿ ನಡೆಯಲಿದೆ ಎಂದು ರಾಜಕೀಯ ವಲಯದಿಂದ ಕೇಳಿಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *