ಮುಡಾ ಹಗರಣ | ಸಿಎಂ ಪತ್ನಿಗೆ ಹೈಕೋರ್ಟ್ ನೋಟಿಸ್

Public TV
1 Min Read

ಬೆಂಗಳೂರು/ಮೈಸೂರು: ಮುಡಾ ಸೈಟ್ ಹಂಚಿಕೆ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ನಿ ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) ಅವರಿಗೆ ಹೈಕೋರ್ಟ್ ನೋಟಿಸ್ ನೀಡಿದೆ.ಇದನ್ನೂ ಓದಿ: ನಮ್ಮಿಬ್ಬರನ್ನು ದೂರ ಮಾಡ್ತಾರೆ ಎಂಬ ಭಯದಲ್ಲಿ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ

ಮುಡಾ (MUDA) ತನಿಖೆಗೆ ರಾಜ್ಯಪಾಲರ ಅನುಮತಿ ಬಗ್ಗೆ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಇಂದು ನಡೆದ ಹೈಕೋರ್ಟ್ ವಿಚಾರಣೆ ನಡೆಸಿತು. ಈ ವೇಳೆ ಹಂಗಾಮಿ ಮುಖ್ಯ ನ್ಯಾ.ಕಾಮೇಶ್ವರ ರಾವ್ ಹಾಗೂ ಸಿಎಂ ಜೋಷಿ ಅವರು ಎಲ್ಲಾ ಮನವಿಗಳು ಒಟ್ಟಿಗೆ ಬರಲಿ. ಆದರೆ ಟ್ಯಾಗ್ ಮಾಡುವುದು ಬೇಡ ಎಂದು ಎಜಿ ಶಶಿಕಿರಣ್ ಶೆಟ್ಟಿ ಮನವಿ ಮಾಡಿದ್ದಾರೆ.

ಈ ವೇಳೆ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನೋಟಿಸ್ (High Court) ನೀಡಿದ್ದು, ಸೆ.4ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.ಇದನ್ನೂ ಓದಿ: ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನ ಪ್ರಮುಖ ಆರೋಪಿ ವಿಜಯಪುರದಲ್ಲಿ ಅರೆಸ್ಟ್

Share This Article