ಬೈಂದೂರಿನಲ್ಲಿ ರಸ್ತೆ ಮೇಲೆ ಮತ್ತೆ ಗುಡ್ಡ ಕುಸಿತ- 2 ಕಿ.ಮೀ ವರೆಗೂ ನಿಂತ ವಾಹನಗಳು

Public TV
1 Min Read

ಉಡುಪಿ: ಜೆಲ್ಲೆಯ ಕುಂದಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮತ್ತೆ ಗುಡ್ಡ ಕುಸಿತಗೊಂಡಿದ್ದು ವಾಹನ ಸವಾರರು ಪರದಾಡುವಂತಾಯಿತು. ಉಡುಪಿಯ ಬೈಂದೂರಿನ ಒತ್ತಿನೆಣೆ ಎಂಬಲ್ಲಿ ಜೇಡಿ ಮಣ್ಣು ಗುಡ್ಡ ರಸ್ತೆ ಮೇಲೆ ಕುಸಿದಿದೆ.

ಖಾಸಗಿ ಹಾಗು ಸರ್ಕಾರಿ ವಾಹನಗಳಿಗೆ ಪರ್ಯಾಯ ರಸ್ತೆಯನ್ನು ಮಾಡಿಕೊಡಲಾಗಿದೆ. ಸುಮಾರು 2 ಕಿ.ಮೀ. ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಗುಡ್ಡ ಕುಸಿತವಾಗಿದೆ.

ಉಡುಪಿ- ಕುಂದಾಪುರ- ಕಾರವಾರ ರಾಷ್ಟ್ರೀಯ ಹೆದ್ದಾರಿ ಅಗಲ ಕಾಮಗಾರಿ ನಡೆಯುತ್ತಿದೆ. ಈ ಮಳೆಗಾಲಕ್ಕೂ ಮುನ್ನ ಹೆದ್ದಾರಿ ಕಾಮಗಾರಿ ಪೂರ್ಣವಾಗಬೇಕಿತ್ತು. ಆದ್ರೆ ಸೇತುವೆಗಳ ಕಾಮಗಾರಿ ವಿಳಂಬವಾಗಿರುವುದರಿಂದ ರಸ್ತೆ ಕಾಮಗಾರಿಯೂ ವಿಳಂಬವಾಗಿದೆ.

ಜಿಲ್ಲಾಡಳಿತ ಮತ್ತು ಕಾಮಗಾರಿ ವಹಿಸಿಕೊಂಡ ಐ.ಆರ್.ಬಿ ಕಂಪನಿ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳದಿರುವುದೇ ಈ ಘಟನೆ ಸಂಭವಿಸಲು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಒತ್ತಿನೆಣೆ ಗುಡ್ಡ ಕುಸಿಯುವ ಸಾಧ್ಯತೆ ಕುರಿತು ಬೈಂದೂರು ಪೊಲೀಸರಿಗೆ ಮಾಹಿತಿ ಬಂದಿತ್ತು. ಜಿಲ್ಲಾಡಳಿತಕ್ಕೆ ಐ.ಆರ್.ಬಿ ಕಂಪೆನಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಕಾಮಗಾರಿ ನಡೆಸುತ್ತೇವೆ ಎಂದು ಭರವಸೆ ನೀಡಿತ್ತು.

ಸದ್ಯ ತೆರವು ಕಾರ್ಯಾಚರಣೆ ಮಾಡಿ ಒಂದು ಭಾಗದ ರಸ್ತೆ ಕ್ಲಿಯರ್ ಮಾಡಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಗುಡ್ಡ ಕುಸಿತದ ಪರಿಣಾಮ ಸುಮಾರು 2 ಕಿಲೋಮೀಟರ್ ಉದ್ದ ಟ್ರಾಫಿಕ್ ಜಾಮ್ ಆಗಿತ್ತು. ವಾರದ ಹಿಂದೆಯೇ ಎರಡು ಬಾರಿ ಗುಡ್ಡ ಕುಸಿತವಾಗಿತ್ತು.

ಇದನ್ನೂ ಓದಿ: ಬೈಂದೂರಿನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು 5 ಗಂಟೆ ಟ್ರಾಫಿಕ್ ಜಾಮ್!

 

Share This Article
Leave a Comment

Leave a Reply

Your email address will not be published. Required fields are marked *