ಪ್ರವಾಸಿಗರೇ ಗಮನಿಸಿ; ಕಾಫಿನಾಡ ಮುಳ್ಳಯ್ಯನಗಿರಿ-ದತ್ತಪೀಠ 3 ದಿನ ಬಂದ್!

Public TV
2 Min Read

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ 3 ದಿನಗಳ ಕಾಲ ಉರುಸ್ (Urus) ನಡೆಯುವುದರಿಂದ ಚಿಕ್ಕಮಗಳೂರು (Chikkamagaluru) ಜಿಲ್ಲಾಡಳಿತ ಪ್ರವಾಸಿಗರಿಗೆ (Tourists) ಸಂಪೂರ್ಣ ನಿರ್ಬಂಧ ಹೇರಿದೆ.

ಉರುಸ್ ಅಂಗವಾಗಿ ಜಿಲ್ಲಾಡಳಿತ 3 ದಿನಗಳ ಕಾಲ ಪಶ್ಚಿಮ ಘಟ್ಟಗಳ ತಪ್ಪಲು ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಮಾಣಿಕ್ಯಾಧಾರ, ಗಾಳಿಕೆರೆ ಸೇರಿ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಿದೆ. ಇದೇ ಮಾರ್ಚ್ 15ರಿಂದ 17ರವರೆಗೆ 3 ದಿನಗಳ ಕಾಲ ಜಿಲ್ಲಾಡಳಿತ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ-ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ಸಂಪೂರ್ಣ ನಿಷೇಧ ಹೇರಿದೆ. ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ಮಾರ್ಚ್ 15 ರಿಂದ 17ವರೆಗೆ 3 ದಿನ ಉರುಸ್ ನಡೆಯುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಪ್ರವಾಸಿ ತಾಣಗಳಿಗೆ ನಿರ್ಬಂಧಿಸಿದೆ. ಇದನ್ನೂ ಓದಿ: ಮತಾಂತರ ಆಗುವಂತೆ ನನಗೆ ಒತ್ತಡ ಹೇರುತ್ತಿದ್ದರು: ಮಾಜಿ ಪಾಕ್ ಕ್ರಿಕೆಟಿಗ ಕನೇರಿಯಾ

ರಾಜ್ಯದ ನಾನಾ ಭಾಗಗಳಿಂದ ಆಗಮಿಸುವ ಸಾವಿರಾರು ಮುಸ್ಲಿಂ ಬಾಂಧವರು ಉರುಸ್ ಆಚರಣೆಯಲ್ಲಿ ಪಾಲ್ಗೊಳ್ಳುವುದರಿಂದ ಯಾವುದೇ ಅಹಿತಕರ ಘಟನೆ ನಡೆಯಬಾರದು. ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಬಾರದು ಎಂದು ಜಿಲ್ಲಾಡಳಿತ ಪ್ರವಾಸಿಗರಿಗೆ ಸಂಪೂರ್ಣ ನಿಷೇಧ ಹೇರಿದೆ. ಇದನ್ನೂ ಓದಿ: ಐಪಿಎಸ್ ಸೂಚನೆಯಂತೆ ರನ್ಯಾಗೆ ಗ್ರೀನ್‌ಚಾನಲ್ – ಡಿಆರ್‌ಐ ಮುಂದೆ ಶಿಷ್ಟಾಚಾರ ಅಧಿಕಾರಿ ಹೇಳಿಕೆ

ಚಿಕ್ಕಮಗಳೂರಿನಿಂದ ದತ್ತಪೀಠದ ಮಾರ್ಗದ ರಸ್ತೆ ಅತ್ಯಂತ ಚಿಕ್ಕದಾಗಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಬಾರದು ಜೊತೆಗೆ ಭದ್ರತೆಯ ದೃಷ್ಠಿಯಿಂದಲೂ ಪ್ರವಾಸಿಗರಿಗೆ ನಿರ್ಬಂಧ ಹಾಕಲಾಗಿದೆ. ಆದರೆ, ಹೋಂ ಸ್ಟೇ ಹಾಗೂ ರೆಸಾರ್ಟ್ಗಳಿಗೆ ಮೊದಲೇ ಬುಕ್ ಮಾಡಿರುವ ಪ್ರವಾಸಿಗರಿಗೆ ಯಾವುದೇ ನಿರ್ಬಂಧವಿಲ್ಲ. ಪ್ರವಾಸಿಗರು ಬುಕ್ಕಿಂಗ್ ತೋರಿಸಿ ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳಿಗೆ ಮಾತ್ರ ಹೋಗಬಹುದು. ಇದನ್ನೂ ಓದಿ: ಕಾಲಿಗೆ ಬ್ಯಾಂಡೇಜ್ ಕಟ್ಟಿಕೊಂಡೇ ಕೋಚಿಂಗ್‌ಗೆ ಬಂದ ರಾಹುಲ್ ದ್ರಾವಿಡ್

ಇನ್ನು ಗಿರಿ ಭಾಗದ ಕಾಫಿ ತೋಟಗಳಿಗೆ ಓಡಾಡುವ ಸ್ಥಳೀಯರಿಗೂ ಯಾವುದೇ ನಿರ್ಬಂಧವಿಲ್ಲ. ಉರುಸ್ ಆಚರಣೆ ಹಿನ್ನೆಲೆ ಪೊಲೀಸ್ ಕೂಡ ಜಿಲ್ಲಾದ್ಯಂತ ಹದ್ದಿನ ಕಣ್ಣಿಟ್ಟಿದೆ. ಚಿಕ್ಕಮಗಳೂರು ನಗರ ಹಾಗೂ ದತ್ತಪೀಠದಲ್ಲಿ 800ಕ್ಕೂ ಅಧಿಕ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಇದನ್ನೂ ಓದಿ: 6 ಅಡಿ ಎತ್ತರದ ವ್ಯಕ್ತಿಯೊಬ್ಬ ಚಿನ್ನವಿದ್ದ ಎರಡು ಬಾಕ್ಸ್ ನೀಡಿದ್ದ: ರನ್ಯಾ ತಪ್ಪೊಪ್ಪಿಗೆ

Share This Article