ಶಿಮ್ಲಾ: ಕುಲುವಿನ ಸೈನ್ಜ್ ಕಣಿವೆಯಲ್ಲಿ ಮೇಘಸ್ಫೋಟ (Cloudburst) ಸಂಭವಿಸಿದ ಬಳಿಕ ಉಂಟಾದ ರಣ ಪ್ರವಾಹಕ್ಕೆ ಇಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಧರ್ಮಶಾಲಾದಲ್ಲಿ ಕನಿಷ್ಠ 15-20 ಮಂದಿ ಕಾರ್ಮಿಕರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆಂದು ವರದಿಯಾಗಿದೆ.
#BREAKING : Cloudburst in Kullu’s Sainj Valley Triggers Flash Flood.#Cloudburst #Kullu #SainjValley #FlashFlood #weatherupdate #KulluCloudburst #HimachalPradesh pic.twitter.com/8jWFGqFzmx
— Mukund Shahi (@Mukundshahi73) June 25, 2025
ದೇಶಾದ್ಯಂತ ಹಲವಾರು ಪ್ರದೇಶಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಭಾರೀ ಅವಾಂತರಗಳು ಸೃಷ್ಟಿಯಾಗುತ್ತಿವೆ. ಈ ನಡುವೆ ಹಿಮಾಚಲ ಪ್ರದೇಶದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಕಾಂಗ್ರಾ ಮತ್ತು ಕುಲು ಜಿಲ್ಲೆಗಳಲ್ಲಿ ಮೇಘಸ್ಫೋಟ ಉಂಟಾಗಿದೆ. ಈ ಹಿನ್ನೆಲೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ವಿದ್ಯಾರ್ಥಿ ಸೋಗಿನಲ್ಲಿ ಐಐಟಿ ಬಾಂಬೆ ಕ್ಯಾಂಪಸ್ಗೆ ಅಕ್ರಮ ಪ್ರವೇಶ – ಮಂಗಳೂರು ಯುವಕ ಅರೆಸ್ಟ್
कुल्लू के सैंज में फटा बादल, हर तरफ सैलाब ही सैलाब#kullu #flood #weaware #safe #monsoon #DivyaHimachal pic.twitter.com/QbwVIwXnhm
— Divya Himachal (@DivyaHimachal) June 25, 2025
ರಣ ಪ್ರವಾಹಕ್ಕೆ ಇಬ್ಬರು ಬಲಿಯಾಗಿದ್ದಾರೆ. ಧರ್ಮಶಾಲಾದಲ್ಲಿ 15-20 ಕಾರ್ಮಿಕರು ಕೊಚ್ಚಿ ಹೋಗಿದ್ದಾರೆ. ಇನ್ನೂ ಹರಿಯುವ ನೀರಿನ ರಭಸಕ್ಕೆ 8 ವಾಹನಗಳು ಕೊಚ್ಚಿಹೋಗಿವೆ, 10 ವಾಹನಗಳು ನೀರಿನ ಮಧ್ಯೆ ಸಿಲುಕಿದ್ದು ಆಟಿಕೆಯಂತೆ ತೇಲುತ್ತಿವೆ. ಕುಲುವಿನಲ್ಲಿ ಅಪ್ಪ-ಮಗಳು ಸೇರಿ ಮೂವರು ಕೊಚ್ಚಿಹೋಗಿದ್ದಾರೆಂದು ವರದಿಯಾಗಿದೆ. ಈಗಾಗಲೇ ಜಿಲ್ಲಾಡಳಿತ ರಕ್ಷಣಾ ತಂಡಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಇದನ್ನೂ ಓದಿ: ಯುಪಿನಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಮೋದಿ ಅಧ್ಯಕ್ಷತೆಯ ಸಂಪುಟ ಅಸ್ತು!
ಉಕ್ಕಿ ಹರಿದ ಪಾರ್ವತಿ ನದಿ
ರಣ ಪ್ರವಾಹದಿಂದಾಗಿ ಪಾರ್ವತಿ ನದಿಯೂ ಉಕ್ಕಿ ಹರಿಯುತ್ತಿದೆ. ಈ ಕುರಿತ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅಲ್ಲದೇ, ಮುಂದಿನ 24 ಗಂಟೆಗಳ ಕಾಲ ಹಗುರಿಂದ ಮಳೆಯಾಗುವ ಸಾಧ್ಯತೆಯಿದ್ದು, ಸ್ಥಳೀಯರು ಗುಡ್ಡ ಪ್ರದೇಶಗಳತ್ತ ಸುಳಿಯದಂತೆ ಸ್ಥಳೀಯ ಆಡಳಿತ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: NASA Axiom-4 Mission; ಆಕ್ಸಿಯಂ-4 ಉಡಾವಣೆ ಯಶಸ್ವಿ – ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಪ್ರಯಾಣ
ಉತ್ತರ ಭಾರತದಲ್ಲೂ ಭಾರೀ ಮಳೆ ಆಗ್ತಿದೆ. ಜಮ್ಮುವಿನ ರಾತ್ರಿ ಸುರಿದ ಭಾರೀ ಮಳೆಗೆ ತಾವಿ ನದಿ ಭೋರ್ಗರೆದಿದೆ. ಏಕಾಏಕಿ ನದಿ ನೀರಿನ ಮಟ್ಟ ಏರಿಕೆ ಆಗಿತ್ತು. ಪ್ರವಾಹದಲ್ಲಿ ಸಿಲುಕಿದ್ದ 9 ಜನರನ್ನ ಪೊಲೀಸರು-ಎಸ್ಡಿಆರ್ಎಫ್ ಸಿಬ್ಬಂದಿ ರಕ್ಷಿಸಿದ್ದಾರೆ. ಇಡೀ ರಾತ್ರಿ ತಾವಿ ನದಿ ಸೇತುವೆ ಕೆಳಗೆ ನಿಂತಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಹಿಮಾಚಲಪ್ರದೇಶದಲ್ಲಿ ಮೇಘಸ್ಫೋಟವಾಗಿದೆ. ಭೀಕರ ಮಳೆಗೆ ಮನೆಗಳು ಕೊಚ್ಚಿ ಹೋಗಿದ್ದರೆ, ರಸ್ತೆಗಳು, ಸೇತುವೆಗಳಿಗೆ ಹಾನಿಯಾಗಿದೆ. ನದಿಗಳು ಅಬ್ಬರಿಸ್ತಿದ್ದು ಎಲ್ಲವನ್ನೂ ಆಪೋಶನ ಪಡೆದಿವೆ. ಮಣಿಕರಣ್-ಸೈಂಜ್-ಬಂಜರ್ ಕಣಿವೆಗಳು ದ್ವೀಪಗಳಾಗಿವೆ. ಕೇರಳದ ವಯನಾಡು ಜಿಲ್ಲೆಯಲ್ಲಿ ನಿನ್ನೆ ಸಂಜೆಯಿಂದ ಭಾರಿ ಮಳೆಯಾಗಿದೆ.