ಮರ್ಮಾಂಗಕ್ಕೆ ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ

Public TV
1 Min Read

ಗದಗ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಗಲಾಟೆ ವೇಳೆ ಓರ್ವನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಗರದ ತೋಂಟದಾರ್ಯ ಮಠದ ಬಳಿ ನಡೆದಿದೆ.

ಚಾಕು ಇರಿತಕ್ಕೆ ಒಳಗಾದ 27 ವರ್ಷದ ಸುದೀಪ್ ಮುಂಡೆವಾಡಿ ಎಂಬ ಯುವಕ ತೀವ್ರ ರಕ್ತಸ್ರಾವದಿಂದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಸುದೀಪ್‍ನ ಸ್ನೇಹಿತರಾಗಿದ್ದ ಆದಿತ್ಯ ಮುತಗಾರ ಹಾಗೂ ಐದಾರು ಜನರ ಸ್ನೇಹಿತರು ಸೇರಿ ಹಲ್ಲೆಮಾಡಿ ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಬೆಳಗಾವಿ ಬಳಿಕ ಮೈಸೂರಲ್ಲೂ ಚಿರತೆ ಭೀತಿ – ಮೇಟಗಳ್ಳಿ ಸುತ್ತಮುತ್ತಲ ಶಾಲೆಗಳಿಗೆ ರಜೆ

ನಾಲ್ಕು ಜನ ಕೈಕಾಲು ಹಿಡಿದುಕೊಂಡು ಹೊಟ್ಟೆ ಭಾಗ ಹಾಗೂ ಮರ್ಮಾಂಗಕ್ಕೆ ಓರ್ವ ಮನಬಂದಂತೆ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದಾರೆ. ನಂತರ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಸಂದೀಪ್ ಮೃತಪಟ್ಟಿದ್ದಾನೆ. ಪೊಲೀಸ್ ಮಾಹಿತಿ ಪ್ರಕಾರ ಹಣಕಾಸಿನ ವ್ಯವಹಾರವೇ ಕಾರಣ ಎನ್ನಲಾಗುತ್ತಿದೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿರ್ಮಾಣ ಹಂತದಲ್ಲಿದ್ದ 4 ಅಂತಸ್ತಿನ ಕಟ್ಟಡ ಕುಸಿತ – ಮೂವರ ದುರ್ಮರಣ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *