ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಆಟೋ ಚಾಲಕನ ಬರ್ಬರ ಹತ್ಯೆ

Public TV
1 Min Read

ಬೆಳಗಾವಿ: ಆಟೋ ಚಾಲಕನೊಬ್ಬನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿರ್ಜನ ಪ್ರದೇಶದಲ್ಲಿ ನಡೆದಿದೆ.

ನೋಹಾನ್ ಧಾರವಾಡಕರ್(23) ಕೊಲೆಯಾದ ಆಟೋ ಚಾಲಕ. ನೋಹಾನ್ 5 ದಿನಗಳ ಹಿಂದೆ ಆಟೋ ಸಮೇತ ಮನೆಯಿಂದ ಹೊರಗಡೆ ತೆರಳಿದ್ದ. ಆದರೆ ಆತ ನಂತರ ಮನೆಗೆ ಮರಳಿರಲಿಲ್ಲ. ಸೋಮವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿರ್ಜನ ಪ್ರದೇಶದಲ್ಲಿ ಆತನ ಆಟೋ ಪತ್ತೆಯಾಗಿದೆ. ಈ ವೇಳೆ ಹುಡುಕಾಟ ನಡೆಸಿದಾಗ ಪಾಳು ಬಿದ್ದ ಮನೆಯೊಂದರ ಶೌಚಾಲಯದಲ್ಲಿ ಆತನ ಶವ ಪತ್ತೆಯಾಗಿದೆ. ಇದನ್ನೂ ಓದಿ: ಬದುಕಿನ ಪಾಠ ಹೇಳಿದ ಪತ್ನಿಯನ್ನೇ ಕೊಂದು ಮನೆಯಲ್ಲೇ ಹೂತಿದ್ದ ಪತಿರಾಯ ಅರೆಸ್ಟ್

POLICE JEEP

ಘಟನೆ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೋಹಾನ್‌ನನ್ನು ಆತನ ಸ್ನೇಹಿತರೇ ಪಾರ್ಟಿಗೆಂದು ಕರೆದುಕೊಂಡು ಹೋಗಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ – ಭಯದಲ್ಲಿ ಗ್ರಾಮದ ಜನರು!

Share This Article
Leave a Comment

Leave a Reply

Your email address will not be published. Required fields are marked *