ಮುಳಬಾಗಿಲು ಗಂಗಮ್ಮ ದೇವಾಲಯ ಮುಂಭಾಗವೇ ಕೈ ನಗರಸಭೆ ಸದಸ್ಯನ ಬರ್ಬರ ಕೊಲೆ

Public TV
1 Min Read

ಕೋಲಾರ: ಹಾಸನ ಬಳಿಕ ನಗರದಲ್ಲಿಂದು ನಗರಸಭೆ ಸದಸ್ಯರೊಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿರುವ ಗಂಗಮ್ಮ ದೇವಾಲಯದ ಮುಂಭಾಗವೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರನ್ನು ಕೊಲೆ ಮಾಡಿದ್ದಾರೆ. ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಅವರನ್ನು ಸಂಚು ಹಾಕಿ ಇಂದು ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಮನೆ ಎದುರು ಮಾರಾಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರ ಬಲಗೈ ಬಂಟ ಮತ್ತು ಆಪ್ತನಾಗಿದ್ದ ಇವರನ್ನು ಮುಂಜಾನೆ ನಾಲ್ಕು ಜನರ ತಂಡ ಲಾಂಗು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಮುಳಬಾಗಿಲು ಡಿವೈಎಸ್‍ಪಿ ಗೌರಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಳಬಾಗಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೂ ತನ್ನ ಬಲಗೈ ಬಂಟನ ಕೊಲೆ ವಿಚಾರ ತಿಳಿದ ಕೊತ್ತೂರು ಮಂಜುನಾಥ್ ಅವರು ಜಾಲಪ್ಪ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.

Share This Article
Leave a Comment

Leave a Reply

Your email address will not be published. Required fields are marked *