ಮಹಿಳೆಗೆ ಕೊಲೆ ಬೆದರಿಕೆ – ಕೊಟ್ಟೂರು ಸ್ವಾಮೀಜಿ ವಿರುದ್ಧ ದೂರು ದಾಖಲು

Public TV
1 Min Read

ಕೊಪ್ಪಳ: ಮಹಿಳೆಗೆ ಕೊಲೆ ಬೆದರಿಕೆ ಒಡ್ಡಿರುವ ಆರೋಪದ ಮೇಲೆ ಕೊಪ್ಪಳ ಜಿಲ್ಲೆಯ ಕೊಟ್ಟೂರು ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಕಲ್ಮಠದ ಕೊಟ್ಟೂರು ಸ್ವಾಮೀಜಿ ಹಾಗೂ ಬಸಲಿಂಗಮ್ಮ ವಿರುದ್ಧ ಕಮಲಾಕ್ಷಿ ಎಂಬವರು ದೂರು ನೀಡಿದ್ದಾರೆ. ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ವಿವಾದ – ಸಿಎಂ ಮಧ್ಯಪ್ರವೇಶಕ್ಕೆ ಸಾಹಿತಿಗಳ ಆಗ್ರಹ

ಕೊಟ್ಟೂರೇಶ್ವರ ಕಾಲೇಜಿನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಕಮಲಾಕ್ಷಿಗೆ ಬಸಲಿಂಗಮ್ಮ ನೀನು ಯಾಕೆ ಇಲ್ಲಿ ಬಂದಿದ್ದೀಯ ಎಂದು ನಿಂದಿಸಿ, ಗಲಾಟೆ ಪ್ರಾರಂಭಿಸಿದ್ದಳು. ಸ್ವಾಮೀಜಿ ಬಳಿ ಪಿಸ್ತೂಲ್ ಇದೆ, ನಿನ್ನ ಕೊಲೆ ಮಾಡಿಸುತ್ತೇನೆ ಎಂದು ಬಸಲಿಂಗಮ್ಮ ಬೆದರಿಕೆ ಹಾಕಿರುವುದಾಗಿ ಕಮಲಾಕ್ಷಿ ದೂರಿನಲ್ಲಿ ನಮೂದಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಆರೋಪ – ಡಿಕೆಶಿ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

POLICE JEEP

ಇದೇ ವೇಳೆ ಗೇಟ್ ಬಳಿ ಇದ್ದ ಕೊಟ್ಟೂರು ಸ್ವಾಮೀಜಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಕಮಲಾಕ್ಷಿ ದೂರು ನೀಡಿದ್ದು, ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಕೊಟ್ಟೂರು ಸ್ವಾಮೀಜಿ ಹಾಗೂ ಬಸಲಿಂಗಮ್ಮ ವಿರುದ್ಧ ಕಲಂ 323, 324, 504 ಹಾಗೂ 506 ಅಡಿಯಲ್ಲಿ ದೂರು ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *