ಮಠದ ಹಣಕಾಸಿನ ವ್ಯವಹಾರಗಳಿಗೆ ಸಹಿ ಹಾಕಲು ಅವಕಾಶ ಕೊಡಿ – ಹೈಕೋರ್ಟ್‌ಗೆ ಮುರುಘಾ ಶ್ರೀ ಅರ್ಜಿ

Public TV
1 Min Read

ಬೆಂಗಳೂರು: ಮಠದ ಹಣಕಾಸಿನ ವ್ಯವಹಾರಗಳಿಗೆ ಸಹಿ ಮಾಡಲು ಅವಕಾಶ ಕೋರಿ ಮುರುಘಾ ಶ್ರೀಗಳು (Murugha Shri) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮಠದ ಆರ್ಥಿಕ ಚಟುವಟಿಕೆಗಳು ಸಂಪೂರ್ಣ ಸ್ತಬ್ಧವಾಗಿದೆ. ಉದ್ಯೋಗಿಗಳಿಗೆ ತಿಂಗಳ ಸಂಬಳವನ್ನು ನೀಡಲು ಆಗುತ್ತಿಲ್ಲ. ಹೀಗಾಗಿ ಜೈಲಿನಲ್ಲೇ ಇದ್ದುಕೊಂಡು ಹಣಕಾಸಿನ ವ್ಯವಹಾರಕ್ಕೆ ಸಹಿ ಹಾಕಲು ಅವಕಾಶ ಕಲ್ಪಿಸುವಂತೆ ಕೋರ್ಟ್‌ಗೆ (Karnataka High Court) ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹೃದಯದ ಸಮಸ್ಯೆ- ಮೆಗ್ಗಾನ್ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್

karnataka highcourt

ಈ ಹಿಂದೆ ಜೈಲಧಿಕಾರಿಗಳು ಮನವಿ ತಿರಸ್ಕಾರ ಮಾಡಿದ್ದರು. ಅಲ್ಲದೇ ಚಿತ್ರದುರ್ಗದ (Chitradurga) ನ್ಯಾಯಾಲಯ ಕೂಡ ಅರ್ಜಿ ವಜಾ ಮಾಡಿತ್ತು. ಹೀಗಾಗಿ ಮುರುಘಾ ಶ್ರೀಗಳು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ವರೆಗೆ ವಿಸ್ತರಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಮಠದ ಹಣಕಾಸಿನ ವ್ಯವಹಾರದ ವಿಚಾರವಾಗಿ ಶ್ರೀಗಳು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ಮುರುಘಾ ಮಠದಿಂದ ಇಬ್ಬರು ಬಾಲಕರು ನಾಪತ್ತೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *