ಬಸವೇಶ್ವರ ಮೂರ್ತಿಗೆ ಮುಸ್ಲಿಮರಿಂದ ಸ್ವಾಗತ

By
1 Min Read

ಬೆಳಗಾವಿ: ಖಾನಾಪುರ ಗ್ರಾಮದ ಲಿಂಗನಮಠದಲ್ಲಿ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ನೂತನ ಮೂರ್ತಿ ಗ್ರಾಮದಲ್ಲಿ ಮೆರವಣಿಗೆ ಮಾಡುತ್ತಿದ್ದ ವೇಳೆ ಮುಸ್ಲಿಮರು ಮಾಲಾರ್ಪಣೆ ಮಾಡಿ ಭವ್ಯ ಮೂರ್ತಿಯನ್ನು ಸ್ವಾಗತಿಸಿದರು.

ಬೆಳಗಾವಿ ಜಿಲ್ಲೆಯ ಖಾನಾಪುರ್ ತಾಲೂಕಿನ ಗಡಿಭಾಗದ ಲಿಂಗನಮಠ ಗ್ರಾಮದಲ್ಲಿ ಜಗಜ್ಯೋತಿ ವಿಶ್ವಗುರು ಬಸವೇಶ್ವರ ನೂತನ ಮೂರ್ತಿ ಮೆರವಣಿಗೆಯ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಗ್ರಾಮದಲ್ಲಿ ಮುಸ್ಲಿಮರು ಭವ್ಯವಾಗಿ ಸ್ವಾಗತಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಶೇ.50ರಷ್ಟು ಪ್ರವಾಸೋದ್ಯಮ ಕ್ಷೇತ್ರಕ್ಕೆ ಮೊಘಲರೇ ಕಾರಣ: ಮುಫ್ತಿ

ಗ್ರಾಮದ ಮಸೀದಿಯ ಮುಂಭಾಗದಲ್ಲಿ ಆಗಮಿಸುತ್ತಿದ್ದಂತೆಯೇ ಲಿಂಗನಮಠ ಗ್ರಾಪಂ ಉಪಾಧ್ಯಕ್ಷ ಮುಸ್ಲಿಮ ಸಮುದಾಯದ ಯುವ ನಾಯಕ ಕಾಶೀಮ ಹಟ್ಟಿಹೊಳಿ ನೇತೃತ್ವದಲ್ಲಿ ಮುಸ್ಲಿಮ ಸಮುದಾಯದವರು ಸೇರಿಕೊಂಡು ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಶ್ವಗುರು ಬಸವಣ್ಣನಿಗೆ ಘೋಷಣೆಯನ್ನು ಕೂಗುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಪದೇ ಪದೇ ಭೂಕಂಪನ – ಬಾಗೇಪಲ್ಲಿ ತಾಲೂಕಿನ ಹಲವೆಡೆ ಭೀಕರ ಶಬ್ದ

Share This Article
Leave a Comment

Leave a Reply

Your email address will not be published. Required fields are marked *