ನನ್ನ ಅಣ್ಣ ಬಹಳಷ್ಟು ಕಷ್ಟ ಪಟ್ಟಿದ್ದಾರೆ, ಅವ್ರೇ ಸಿಎಂ ಆಗ್ಬೇಕು: ಡಿಕೆ ಸುರೇಶ್

Public TV
1 Min Read

ನವದೆಹಲಿ: ಡಿ.ಕೆ ಶಿವಕುಮಾರ್ (DK Shivakumar) ನನ್ನ ಅಣ್ಣ, ಬಹಳಷ್ಟು ಕಷ್ಟ ಪಟ್ಟಿದ್ದಾರೆ. ಹಾಗಾಗಿ ಅವರೇ ಸಿಎಂ ಆಗಬೇಕು ಎಂದು ಸಂಸದ ಡಿ.ಕೆ ಸುರೇಶ್ (D.K Suresh) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ನಿರೀಕ್ಷೆ ಪ್ರಕಾರ ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು. ಸತತವಾಗಿ 3 ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿದ್ದಾರೆ. ಪಕ್ಷ ಸಂಕಷ್ಟದಲ್ಲಿ ಇತ್ತು. ಸೋನಿಯಾ ಗಾಂಧಿ (Sonia Gandhi) ಯವರಿಗೆ ಹಾಗೂ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಯವರಿಗೆ ಮಾತನ್ನ ಕೊಟ್ಟಿದ್ರು. ಆ ಮಾತಿನಂತೆ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದಾರೆ ಎಂದರು.

ಮುಂದಿನ ತೀರ್ಮಾನ ಪಕ್ಷದ ವರಿಷ್ಟರು ತೆಗೆದುಕೊಳ್ಳುತ್ತಾರೆ. ಒಟ್ಟಾರೆ ನಮ್ಮ ಜವಾಬ್ದಾರಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರುವುದಾಗಿತ್ತು. ಆ ಕೆಲಸವನ್ನು ಸಂಕಷ್ಟ ಸಮಯದಲ್ಲೂ ಸಹ ನಾವು ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಪಟ್ಟಕ್ಕೆ ಸಿದ್ದು ಪಟ್ಟು – ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ

Share This Article