ಯಾರೇ ಲಂಚ ಕೇಳಿದರೂ ಆಡಿಯೋ – ವೀಡಿಯೋ ನನಗೇ ಕಳುಹಿಸಿ: ಪಂಜಾಬ್ ಸಿಎಂ

Public TV
1 Min Read

ಚಂಡೀಗಡ: ಪಂಜಾಬ್‍ನ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ `ಭ್ರಷ್ಟಾಚಾರ ಮುಕ್ತ’ ಸಹಾಯವಾಣಿ ಪ್ರಾರಂಭಿಸುತ್ತಿದ್ದು, ಮಾರ್ಚ್ 23ರಂದು ಅನಾವರಣಗೊಳ್ಳಲಿದೆ.

ಸ್ವಾತಂತ್ರ್ಯ ಹೋರಾಟಗಾರ ಭಗತ್‍ಸಿಂಗ್ ಅವರ ಹುಟ್ಟುಹಬ್ಬದ ಪ್ರಯುಕ್ತ ಮಾರ್ಚ್ 23ರಂದು ಸಹಾಯವಾಣಿ ಪ್ರಾರಂಭಿಸಲಾಗುತ್ತದೆ ಎಂದೂ ಅವರು ಭರವಸೆ ನೀಡಿದ್ದಾರೆ. ಇದನ್ನೂ ಓದಿ:  ಪುಟಿನ್‍ನನ್ನು ‘ಯುದ್ಧಾಪರಾಧಿ’ ಎಂದ ಬೈಡನ್

`ಸಹಾಯವಾಣಿ ಸಂಖ್ಯೆಯು ನನ್ನ ವೈಯಕ್ತಿಕ ಸಂಪರ್ಕ ಸಂಖ್ಯೆಯಾಗಿದ್ದು, ಯಾರೇ ಲಂಚ ಕೇಳಿದರೂ ಅದರ ಆಡಿಯೋ, ವಿಡಿಯೋ ಅನ್ನು ಈ ಸಂಖ್ಯೆಗೆ ಕಳುಹಿಸಿ’ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಯಾವುದೇ ಸರ್ಕಾರಿ ಅಧಿಕಾರಿಗಳಿಗೆ ತೊಂದರೆ ಕೊಡಬೇಕು ಎನ್ನುವುದು ನನ್ನ ಉದ್ದೇಶವಲ್ಲ. ಶೇ.99 ಸರ್ಕಾರಿ ನೌಕರರು ಪ್ರಾಮಾಣಿಕರಾಗಿದ್ದಾರೆ. ಆದರೆ, ಶೇ.1 ರಷ್ಟು ನೌಕರರು ಭ್ರಷ್ಟರಾಗಿದ್ದಾರೆ. ಎಎಪ್ ನಿಂದ ಮಾತ್ರ ಈ ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯ ಆದ್ದರಿಂದ ಈ ಸಹಾಯವಾಣಿ ಆರಂಭಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹ್ಯಾಪಿ ಬರ್ತ್ ಡೇ ಅಪ್ಪು : ದಕ್ಷಿಣದ ಸಿನಿತಾರೆಯರ ಭಾವುಕ ಸಂದೇಶ 

Share This Article
Leave a Comment

Leave a Reply

Your email address will not be published. Required fields are marked *