ಬೆಂಗಳೂರು: ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿ, ವಾಸ್ತವದ ವಿರುದ್ಧವಾಗಿ ಸುದ್ದಿ ಪ್ರಕಟವಾಗಿದೆ ಎಂದು ಮಾಜಿ ಸಚಿವ ಆರ್ವಿ ದೇಶಪಾಂಡೆ (RV Deshpande) ಹೇಳಿದ್ದಾರೆ.
ನಾನು ಸಿಎಂ ಆಗಿದ್ದರೆ ಪಂಚ ಗ್ಯಾರಂಟಿ ಯೋಜನೆಗಳನ್ನು (Gurantee Sddcheme) ಅನುಷ್ಠಾನ ಮಾಡುತ್ತಿರಲಿಲ್ಲ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅವರು ಸ್ಪಷ್ಟನೆ ನೀಡಿದ್ದಾರೆ.
ಸ್ಪಷ್ಟನೆಯಲ್ಲಿ ಏನಿದೆ?
ದಾಂಡೇಲಿಯಲ್ಲಿ ನಡೆದ ಸಭೆಯಲ್ಲಿ ನಾನು ಮಾತನಾಡುವ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳ ಕುರಿತು ಹೇಳುವಾಗ ನಾನು ಮುಖ್ಯಮಂತ್ರಿಯವರ ಸಮೀಪದಲ್ಲಿರುವವನು, ಆದರೆ ಸಿದ್ದರಾಮಯ್ಯನವರು ಯಾವ ಯೋಜನೆಗಳನ್ನು ಘೋಷಿಸುತ್ತಾರೆ ಎಂಬುದು ನನಗೂ ಗೊತ್ತಿರುವುದಿಲ್ಲ. ಸಿದ್ದರಾಮಯ್ಯನವರು ಪಳಗಿದ ನಾಯಕರು, ಜನನಾಯಕರಾಗಿದ್ದಾರೆ. ಬಡವರ ಪರವಾಗಿ ಹೋರಾಡುವ ನಿಜವಾದ ನಾಯಕರು. ಅವರು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ, ಒಳ್ಳೆಯ ಆಡಳಿತ ನೀಡುತ್ತಿರುವುದು ಅವರ ಶಕ್ತಿ. ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿರುವುದು ಅವರ ಜನಪರಮನೋಭಾವದಿಂದಾಗಿದೆ ಎಂಬುದು ನನ್ನ ಮಾತಿನ ತಾತ್ಪರ್ಯವಾಗಿತ್ತು. ಇದನ್ನೂ ಓದಿ: ನಾನು ಸಿಎಂ ಆಗಿದ್ದಿದ್ರೆ ʻಪಂಚ ಗ್ಯಾರಂಟಿʼ ಅನುಷ್ಠಾನ ಮಾಡ್ತಿರಲಿಲ್ಲ, ಗ್ಯಾರಂಟಿ ಹೊರೆಯಾಗಿದೆ: ಆರ್.ವಿ.ದೇಶಪಾಂಡೆ