ಉತ್ತರ ಪ್ರದೇಶದಲ್ಲಿ ಮೈಸೂರಿನ CISF ಯೋಧ ನಿಧನ

Public TV
0 Min Read

ಮೈಸೂರು: ಉತ್ತರ ಪ್ರದೇಶಕ್ಕೆ ಚುನಾವಣಾ ಕರ್ತವ್ಯಕ್ಕೆಂದು ಹೋಗಿದ್ದ ಮೈಸೂರಿನ ಸಿಐಎಸ್‍ಎಫ್ ಯೋಧ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಜಿಲ್ಲೆಯ ಹುಣಸೂರಿನ ಮಂಜುನಾಥ ಬಡಾವಣೆ ನಿವಾಸಿ ಆರ್.ಕೆ.ಪ್ರಕಾಶ್ ಮೃತಪಟ್ಟ ಯೋಧ. ಮೈಸೂರಿನ ಆರ್‌ಬಿಐ ನಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ಅವರು, ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶಕ್ಕೆ ತೆರಳಿದ್ದರು. ಇಂದು ಬೆಳಗ್ಗೆ ರಾಯ್ ಬರೇಲಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಪ್ರಕಾಶ್ ಅವರ ಪಾರ್ಥಿವಾ ಶರೀರ ಸ್ವಗ್ರಾಮಕ್ಕೆ ರವಾನೆಯಾಗಿದ್ದು, ಹುಟ್ಟೂರು ಪಿರಿಯಾಪಟ್ಟಣದಲ್ಲಿ ಅಂತ್ಯ ಸಂಸ್ಕಾರದ ಸಿದ್ಧತೆಗಳು ನಡೆದಿವೆ.

Share This Article
Leave a Comment

Leave a Reply

Your email address will not be published. Required fields are marked *