‘ಇಂಥದ್ದನ್ನ ಸಹಿಸಬೇಕಾ ಹೇಳಿ’- ಟೀಕೆಯ ಬೆನ್ನಲ್ಲೇ ಚಾಮುಂಡಿ ಬೆಟ್ಟದ ರಥದ ಚಕ್ರಗಳ ಪೇಂಟಿಂಗ್ ಬದಲಾವಣೆ

Public TV
1 Min Read

ಮೈಸೂರು: ಚಾಮುಂಡಿಬೆಟ್ಟದಲ್ಲಿ ರಥದ ಚಕ್ರಕ್ಕೆ ಆಕ್ಷೇಪರ್ಹ ಚಿತ್ರರಚನೆ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಪರ ವಿರೋಧದ ನಡುವೆ ರಥದ ಚಕ್ರಗಳ ಪೇಂಟಿಂಗ್ ಬದಲಾವಣೆ ಮಾಡಲಾಗಿದೆ.

ಸಂಸದ ಪ್ರತಾಪ್ ಸಿಂಹ ಅವರು ಚಾಮುಂಡಿ ಬೆಟ್ಟದ ರಥ ಚಕ್ರಗಳಿಗೆ ಮಾಡಿದ್ದ ಪೇಂಟಿಂಗ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರ ಹಾಕಿದ್ದರು. ಈ ಕುರಿತು ಟ್ವೀಟ್ ಮಾಡಿದ್ದ ಸಂಸದರು, ಚಾಮುಂಡಿ ಬೆಟ್ಟದ ರಥದ ಚಕ್ರಗಳಿಗೆ ಮಾಡಿ ಪೇಂಟಿಂಗ್ ನೋಡಿ… ಇಂಥದ್ದನ್ನ ಸಹಿಸಬೇಕಾ ಹೇಳಿ ಎಂದು ಪ್ರಶ್ನಿಸಿದ್ದರು. ಬಳಿಕ ಮತ್ತೊಂದು ಟ್ವೀಟ್ ಮಾಡಿ, ನಿಮ್ಮ ಗಮನಕ್ಕೆ ಇರಲಿ ಅಂತ ಫೋಟೋ ಹಾಕಿದ್ದೇನೆ. ಪಾಠ ಕಲಿಸದೇ ಬಿಡಲ್ಲ ಎಂದು ಗುಡುಗಿದ್ದರು.

ಚಿತ್ರದಲ್ಲಿ ಏನಿತ್ತು?:
ಚಾಮುಂಡಿ ಬೆಟ್ಟದ ಮಹಾಬಲೇಶ್ವರ ರಥದ ಚಕ್ರಗಳಿಗೆ ಹಸಿರು ಬಣ್ಣದಿಂದ ಅರ್ಧ ಚಂದ್ರ ಹಾಗೂ ಅದರ ಮೇಲೊಂದು ನಕ್ಷದ ಬಿಂಬಿಸುವಂತಹ ಕಲಾಕೃತಿ ಬಿಡಿಸಲಾಗಿತ್ತು. ಇದಕ್ಕೆ ಸಂಸದ ಪ್ರತಾಪ್ ಸಿಂಹ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ರಥದ ಚಕ್ರಗಳ ಮೇಲಿದ್ದ ಅರ್ಧ ಚಂದ್ರ ಹಾಗೂ ನಕ್ಷತ್ರದ ಬಿಂಬಿಸುವ ಕಲಾಕೃತಿಯನ್ನು ತೆಗೆದು ಹಾಕಲಾಗಿದೆ.

ಆದರೆ ಸಂಸದರ ನಡೆಗೆ ಸಾರ್ವಜನಿಕ ವಲಯದಲ್ಲಿ ಪರ ವಿರೋಧ ವ್ಯಕ್ಯವಾಗಿತ್ತು. ಸಂಸದರೇ ಹೀಗೆ ಪ್ರಚೋದನಕಾರಿ ಪೋಸ್ಟ್ ಮಾಡಿದ್ದು ಸರಿಯೇ ಎಂದು ಕೆಲವರು ಪ್ರಶ್ನಿಸಿದ್ದರು. ಈ ವಿಚಾರ ಮುಜುರಾಯಿ ಇಲಾಖೆ ಅಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆ ಪೇಟಿಂಗ್ ಬದಲಾವಣೆ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *