4 ಪುಟ ಡೆತ್‍ನೋಟ್ ಬರೆದಿಟ್ಟು 6 ತಿಂಗ್ಳ ಹಿಂದೆಯಷ್ಟೇ ಮದ್ವೆಯಾಗಿದ್ದ ಸಿಎಂ ಆಪ್ತರ ಪುತ್ರಿ ಆತ್ಮಹತ್ಯೆ

Public TV
1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರ ಪರಮಾಪ್ತ, ಕಾರ್ಪೋರೇಟರ್ ನಾಗಭೂಷಣ್ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೆಚ್‍ಎಸ್‍ಆರ್ ಲೇಔಟ್‍ನಲ್ಲಿ ನಡೆದಿದೆ.

ಮೈಸೂರು ಕಾರ್ಪೋರೇಟರ್ ನಾಗಭೂಷಣ್ ಪುತ್ರಿ ವನಿತಾ ಆತ್ಮಹತ್ಯೆ ಮಾಡಿಕೊಂಡಿರುವ ನವವಿವಾಹಿತೆ. ಆರು ತಿಂಗಳ ಹಿಂದೆಯಷ್ಟೇ ತಮಿಳುನಾಡು ಮೂಲದ ಟೆಕ್ಕಿ ವಸಂತ್ ಎಂಬವರ ಜೊತೆ ಮದ್ವೆಯಾಗಿದ್ದು, ಬೆಂಗಳೂರಿನ ಹೆಚ್‍ಎಸ್‍ಆರ್ ಲೇಔಟ್ 25ನೇ ಕ್ರಾಸ್‍ನ ತನ್ನ ಗಂಡನ ಮನೆಯಲ್ಲಿ ವಾಸವಾಗಿದ್ದರು. ಆದರೆ ಗಂಡನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವನಿತಾ ಮತ್ತು ವಸಂತ್ ದಂಪತಿ ಅನ್ಯೋನ್ಯವಾಗಿದ್ದರು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮೃತ ವನಿತಾ ಸಾಯುವ ಮುಂಚೆ 4 ಪುಟದ ಡೆತ್‍ನೋಟ್ ಬರೆದಿದ್ದಾರೆ. ನನ್ನ ಅತ್ತೆ ಗಾಯತ್ರಿ ಪ್ರತಿನಿತ್ಯ ಮನೆಯಲ್ಲಿ ಕಿರುಕುಳ ನೀಡುತಿದ್ದಾರೆ. ಅಪ್ಪನ ಮನೆಯಿಂದ ವರದಕ್ಷಿಣೆ ತರುವಂತೆ ಪೀಡಿಸುತ್ತಾರೆ. ಅಷ್ಟೇ ಅಲ್ಲದೇ ಸರಿಯಾಗಿ ಊಟ ತಿಂಡಿಯನ್ನು ಸಹ ನೀಡದೆ ಹಿಂಸೆ ನೀಡುತ್ತಿದ್ದಾರೆ. ಇದರಿಂದ ನಾನು ಬೇಸತ್ತು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವನಿತಾ ಡೆತ್ ನೋಟ್‍ನಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ.

ಶುಕ್ರವಾರ ಸಂಜೆ ಸುಮಾರು 6.30 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ 8 ಗಂಟೆಗೆ ಪತಿ ವಸಂತ್ ಮನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಗೊತ್ತಾಗಿದೆ. ನಂತರ ಹೆಚ್‍ಎಸ್‍ಆರ್ ಲೇಔಟ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಹೆಚ್‍ಎಸ್‍ಆರ್ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದೇಹವನ್ನು ಸೆಂಟ್ ಜಾನ್ಸ್ ಅಸ್ಪತ್ರೆಗೆ ರವಾನಿಸಲಾಗಿದೆ. ಸದ್ಯಕ್ಕೆ ಪೊಲೀಸರು ಎಫ್‍ಐಆರ್ ದಾಖಸಿಕೊಂಡಿದ್ದು, ಮೃತ ವನಿತಾಳ ಗಂಡ ವಸಂತ್ ಮತ್ತು ಅತ್ತೆ ಗಾಯತ್ರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *